ಗ್ರಾಮಸ್ಥರ ಜೊತೆ ಸಂಸದ ರಾಘವೇಂದ್ರ ಪ್ರತಿಭಟನೆ, ‘ನಿಮ್ಮ ಹೆಂಡತಿ, ಮಕ್ಕಳಿಗೆ ಒಳ್ಳೆಯದಾಗಲ್ಲ’ ಅಂತಾ ಎಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 DECEMBER 2023

SHIMOGA : ಸಕ್ಕರೆ ಕಾರ್ಖಾನೆ ಜಾಗದಿಂದ ರೈತರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ಯರಗನಾಳು, ಸದಾಶಿವಪುರ ಮತ್ತು ಮಲವಗೊಪ್ಪ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ದೊಡ್ಡ ಸಂಖ್ಯೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌ ಸೇರಿದಂತೆ ಹಲವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರತಿಭಟನೆಗೆ ಕಾರಣವೇನು?

ಶುಗರ್‌ ಫ್ಯಾಕ್ಟರಿ ಆಡಳಿತ ಕಂದಾಯ ಕಟ್ಟಲಾಗದೆ ಮತ್ತು ಸಾಲ ಮರುಪಾವತಿ ಮಾಡಲಾಗದೆ ಕೆಲವು ಜಮೀನನ್ನು ಸರ್ಕಾರಕ್ಕೆ ಕೊಟ್ಟಿತ್ತು. ದಾಖಲೆಗಳಲ್ಲಿ ಸರ್ಕಾರಿ ಪಡಾ ಎಂದು ನಮೂದಾಗಿತ್ತು. ಈಚೆಗೆ ಷುಗರ್‌ ಫ್ಯಾಕ್ಟರಿ ಆಡಳಿತದ ಅರ್ಜಿ ಆಲಿಸಿದ ಮದ್ರಾಸ್‌ ಹೈಕೋರ್ಟ್‌, ಕಂದಾಯ ಪಾವತಿ ಮಾಡಿದರೆ ಜಮೀನನ್ನು 12 ವಾರದಲ್ಲಿ ಆಡಳಿತ ಮಂಡಳಿಗೆ ಹಿಂತಿರುಗಿಸುಂತೆ ಆದೇಶಿಸಿದೆ. ಈಗಾಗಲೇ ಆ ಜಾಗದಲ್ಲಿ ರೈತರು ಸಾಗುವಳಿ ಮಾಡುತ್ತಿದ್ದಾರೆ. ಹಲವು ವಸತಿ ಪ್ರದೇಶಗಳು ಇದ್ದಾವೆ. ಸರ್ಕಾರಿ ಕಚೇರಿಗಳಿವೆ. ರೈತರನ್ನು ಒಕ್ಕಲೆಬ್ಬಿಸುವ ಬದಲು ಶುಗರ್‌ ಫ್ಯಾಕ್ಟರಿಗೆ ಸರ್ಕಾರ ಪರ್ಯಾಯ ಜಮೀನು ನೀಡಲಿ ಎಂದು ಆಗ್ರಹಿಸಿದರು.

ಸರ್ಕಾರದ ವಿರುದ್ಧ ಸಂಸದ ಆಕ್ರೋಶ

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸಚಿವ ಮಧು ಬಂಗಾರಪ್ಪ ರೈತರ ಕಷ್ಟ ಅರ್ಥ ಮಾಡಿಕೊಳ್ಳಬೇಕು. ಯಾವ ಕಾನೂನಿನ ಅಡಿ ಶುಗರ್‌ ಫ್ಯಾಕ್ಟರಿ ಜಾಗದಲ್ಲಿ ಸರ್ಕಾರಿ ಕಚೇರಿಗಳನ್ನು ನಿರ್ಮಿಸಲಾಗಿದೆಯೋ ಅದೆ ಕಾನೂನಿನ ಅಡಿ ರೈತರು ಬದುಕು ಕಟ್ಟಿಕೊಂಡಿದ್ದಾರೆ. ರೈತರನ್ನು ಒಕ್ಕಲೆಬ್ಬಿಸಲು ಒಂದೇ ಒಂದು ಹೆಜ್ಜೆ ಮುಂದಿಟ್ಟರೂ ನಿಮ್ಮ ಹೆಂಡತಿ, ಮಕ್ಕಳಿಗೆ ಒಳ್ಳೆಯದಾಗುವುದಿಲ್ಲ. ಸರ್ಕಾರ ಅಡ್ವೊಕೇಟ್‌ ಜನರಲ್‌ ಅವರೊಂದಿಗೆ ಚರ್ಚಿಸಿ ಕೂಡಲೆ ರೈತರನ್ನು ಕಾಪಾಡುವ ಕೆಲಸ ಮಾಡಬೇಕಿದೆ ಎಂದರು.

r3

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಮಾತನಾಡಿ, ಯಾರು ಇಲ್ಲಿಯ ತನಕ ಆ ಜಾಗ ಅನುಭವಿಸಿದ್ದಾರೊ ಅವರಿಗೆ ಭೂಮಿ ಹಕ್ಕು ಹಿಡುವಳಿ ಪತ್ರ ನೀಡಬೇಕು. ಒಂದಿಂಚು ಭೂಮಿಯನ್ನೂ ರೈತರಿಂದ ಕಸಿದುಕೊಳ್ಳಲು ನಾವು ಬಿಡುವುದಿಲ್ಲ. ಉಸ್ತುವಾರಿ ಸಚಿವರು ಕಪಟ ನಾಟಕ ಬಿಟ್ಟು ರೈತರ ಪರವಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು.

ಹೋರಾಟ ಸಮಿತಿ ಪ್ರಮುಖರಾದ ಕೃಷ್ಣಪ್ಪ, ಬಿಜೆಪಿ ಮುಖಂಡರಾದ ರತ್ನಾಕರ್‌ ಶೆಣೈ, ವಿನ್ಸೆಂಟ್‌ ರೋಡ್ರಿಗಸ್‌ ಸೇರಿದಂತೆ ಹಲವರು ಇದ್ದರು.

sugar factory issue protest By BY Raghavendra

sugar factory issue protest By BY Raghavendra

sugar factory issue protest By BY Raghavendra

sugar factory issue protest By BY Raghavendra

sugar factory issue protest By BY Raghavendra

sugar factory issue protest By BY Raghavendra

ಇದನ್ನೂ ಓದಿ – ರಸ್ತೆ ಅಪಘಾತ, ಶಾಸಕ ಸಂಗಮೇಶ್ವರ್‌ ಆಪ್ತ ಸಹಾಯಕ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2023

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

Leave a Comment