ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜೂನ್ 2021
ಲಾಕ್ಡೌನ್ ಸಡಿಲ ಮಾಡಿ, ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಸರ್ಕಾರಿ ನೌಕರರಿಗಾಗಿ ಬಿಟ್ಟಿರುವ ಬಸ್ಸುಗಳಲ್ಲಿ ಗೈಡ್ಲೈನ್ ಉಲ್ಲಂಘಿಸಲಾಗುತ್ತಿದೆ.
ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚು ಪ್ರಯಾಣಿಕರು ಇರುವಂತಿಲ್ಲ ಎಂದು ಸರ್ಕಾರ ಗೈಡ್ಲೈನ್ನಲ್ಲಿ ಪ್ರಕಟಿಸಿದೆ. ಆದರೆ ಸರ್ಕಾರಿ ನೌಕರರು ಪಯಣಿಸುವ ಬಸ್ಸಿನಲ್ಲೆ ಗೈಡ್ಲೈನ್ ಪಾಲನೆ ಆಗುತ್ತಿಲ್ಲ.
ಇದನ್ನು ಓದಿ | ಶಿವಮೊಗ್ಗ ಜಿಲ್ಲೆಯಿಂದ KSRTC ಬಸ್ ಸಂಚಾರ ಶುರು, ಯಾವೆಲ್ಲ ಊರಿಗೆ ತೆರಳುತ್ತಿವೆ ಸರ್ಕಾರಿ ಸಾರಿಗೆ?
ವಿವಿಧ ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗಾಗಿ ಪ್ರತ್ಯೇಕವಾಗಿ ಸರ್ಕಾರಿ ಬಸ್ಗಳನ್ನು ಬಿಡಲಾಗಿದೆ. ಆದರೆ ಈ ಬಸ್ಸುಗಳಲ್ಲಿ ಸರ್ಕಾರಿ ನೌಕರರ ನಡುವೆ ಸಾಮಾಜಿಕ ಅಂತರವಿಲ್ಲದಾಗಿದೆ. ಮೂರು ಮತ್ತು ಎರಡು ಸೀಟರ್ ಬಸ್ಸುಗಳಿದ್ದು ಎಲ್ಲ ಸೀಟುಗಳು ಭರ್ತಿಯಾಗಿ ತೆರಳುತ್ತಿವೆ.
ಈ ಬಗ್ಗೆ ಪ್ರಶ್ನಿಸಿದಾಗ ಹೆಸರು ಹೇಳಲು ಇಚ್ಛಿಸದ ಮಹಿಳಾ ಸಿಬ್ಬಂದಿಯೊಬ್ಬರು, ಹೆಚ್ಚುವರಿ ಬಸ್ ಬಿಡುತ್ತಿಲ್ಲ. ಡ್ಯೂಟಿ ತಪ್ಪಿಸುವಂತಿಲ್ಲ. ಅನಿವಾರ್ಯವಾಗಿ ಹೀಗೆ ಸಂಚರಿಸಬೇಕಾಗಿದೆ. ನಮಗೂ ಕರೋನ ಭಯವಿದೆ ಅನ್ನುತ್ತಾರೆ.
ಉಳಿದ ಪ್ರಯಾಣಿಕರಿಗೆ ಮಾದರಿ ಆಗಬೇಕಿದ್ದ ಸರ್ಕಾರಿ ನೌಕರರ ಬಸ್ಸುಗಳಲ್ಲೆ ನಿಯಮ ಉಲ್ಲಂಘಿಸುತ್ತಿರುವುದು ಪ್ರಶ್ನಾರ್ಹವಾಗಿದೆ.


LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು







