ಭದ್ರಾವತಿಯಿಂದ ಬೈಕ್ ಜಾಥಾ, ಶಿವಮೊಗ್ಗದ ಪ್ರಮುಖ ವೃತ್ತಗಳಲ್ಲಿ ರಸ್ತೆ ತಡೆ, ಕಾರ್ಮಿಕರ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 17 FEBRURARY 2023

SHIMOGA : ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನಕ್ಕೆ ಆಗ್ರಹಿಸಿ ಗುತ್ತಿಗೆ ಕಾರ್ಮಿಕರು ಇವತ್ತು ಶಿವಮೊಗ್ಗದವರೆಗೆ ಜಾಥಾ ನಡೆಸಿದರು. ಅಲ್ಲದೆ ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ನಡೆಸಿ, ಪ್ರತಿಭಟನಾ ಸಭೆ ಮಾಡಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

VISL Workers Protest in Shimoga

ಭದ್ರಾವತಿಯಿಂದ ಬೈಕ್ ಜಾಥಾ

ಗುತ್ತಿಗೆ ಕಾರ್ಮಿಕರು ಭದ್ರಾವತಿ ವಿಐಎಸ್ಎಲ್ (VISL) ಕಾರ್ಖಾನೆಯಿಂದ ಶಿವಮೊಗ್ಗದವರೆಗೆ ಬೈಕ್ ಜಾಥಾ ನಡೆಸಿದರು. ನೂರಾರು ಬೈಕುಗಳಲ್ಲಿ ಕಾರ್ಮಿಕರು, ಅವರ ಕುಟುಂಬದವರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಮೀನಾಕ್ಷಿ ಭವನದವರೆಗೆ ಬೈಕ್ ಜಾಥಾ ನಡೆಸಲಾಯಿತು. ಸೈನ್ಸ್ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

VISL Workers Protest in Shimoga

ಸರ್ಕಲ್ ಗಳಲ್ಲಿ ಪ್ರತಿಭಟನಾ ಸಭೆ

ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಕಾರ್ಮಿಕರು ಮೆರವಣಿಗೆ ಮಾಡಿದರು. ಅಮೀರ್ ಅಹಮದ್ ಸರ್ಕಲ್, ಗೋಪಿ ಸರ್ಕಲ್ ನಲ್ಲಿ ರಸ್ತೆ ತಡೆ ನಡೆಸಿ, ಸಭೆ ಮಾಡಿದರು. ಈ ವೇಳೆ ಮಾತನಾಡಿದ ಕಾರ್ಮಿಕ ಮುಖಂಡರು, ವಿಐಎಸ್ಎಲ್ ಪುನಶ್ಚೇತನ ಮಾಡಬೇಕು. ಈ ಕುರಿತು ಸರ್ಕಾರಗಳು ಇಚ್ಛಾಶಕ್ತಿ ತೋರಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 2 ವಾರ ಅತ್ಯಂತ ಮಹತ್ವದ್ದು, ಕಾರಣವೇನು? ಮೊದಲು ಲ್ಯಾಂಡ್ ಆಗುವ ವಿಮಾನ ಯಾವುದು?

VISL Workers Protest in Shimoga

ಮತ್ತೊಂದು ಸರ್ಕಲ್ ನಲ್ಲಿ ಧರಣಿ

ಗೋಪಿ ಸರ್ಕಲ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಗುತ್ತಿಗೆ ಕಾರ್ಮಿಕರು, ಬಳಿಕ ಮಹಾವೀರ ವೃತ್ತದಲ್ಲಿ ಸಭೆ ನಡೆಸಿದರು. ಜಿಲ್ಲಾಧಿಕಾರಿಯವರೆ ತಮ್ಮ ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದರು. ಸುಮಾರು ಒಂದು ಗಂಟೆ ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರ ವ್ಯತ್ಯಯವಾಯಿತು. ಈ ಹಿನ್ನೆಲೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸುವಂತೆ ಅವಕಾಶ ಕಲ್ಪಿಸಿದರು.

VISL Workers Protest in Shimoga

VISL Workers Protest in Shimoga

VISL Workers Protest in Shimoga

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment