VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ (VISL) ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳ ನಿಯೋಗ ಪೇಜಾವರ ಮಠದ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ರಾಕೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಆನಂದ್, ನಿವೃತ್ತ ಕಾರ್ಮಿಕ ನರಸಿಂಹಾಚಾರ್ ಸೇರಿದಂತೆ ಹಲವರು ಶ್ರೀಗಳನ್ನು ಭೇಟಿಯಾಗಿ ಕಾರ್ಖಾನೆಯ ಪರಿಸ್ಥಿತಿ ವಿವರಿಸಿದರು.

ಇದನ್ನೂ ಓದಿ » ಭದ್ರಾವತಿ VISLಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ನಿಯೋಗ, ಎಲ್ಲೆಲ್ಲಿ ಭೇಟಿ ನೀಡಿದರು? ಯಾರನ್ನೆಲ್ಲ ಭೇಟಿಯಾದರು?

https://chat.whatsapp.com/JPJ0lTQsTKf365Fqu6Q7cd

ವಿಐಎಸ್‌ಎಲ್‌ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳು ಬಗೆಹರಿಯಲಿವೆ. ಕಾರ್ಖಾನೆಗೆ ದೊಡ್ಡ ಇತಿಹಾಸವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪರಿಶ್ರಮದಿಂದ ಸ್ಥಾಪನೆಗೊಂಡ ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂಬ ವಿಶ್ವಾಸವಿದೆ ಎಂದು ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿ ತಿಳಿಸಿದರು.

VISL-Contract-Workers-union-meets-Pejavara-seer

ಕಾರ್ಖಾನೆ ವಿಚಾರದಲ್ಲಿ ಆಶಾದಾಯಕ ಬೆಳವಣಿಗೆಗಳು ಕಂಡು ಬರುತ್ತಿವೆ. ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಕುರಿತು ಕೇಂದ್ರ ಸಚಿವರು, ಸಂಸದರೊಂದಿಗೆ ಚರ್ಚಿಸುತ್ತೇನೆ.ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿ, ಪೇಜಾವರ ಮಠ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment