ವಿಮಾನ ನಿಲ್ದಾಣದ ಹೆಸರಿನ ವಿಚಾರ, ಒಕ್ಕಲಿಗ ಸಮುದಾಯ ಮುಖಂಡರಿಂದ ಸರ್ಕಾರದ ಮೇಲೆ ಒತ್ತಡ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 22 FEBRURARY 2023

SHIMOGA : ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು (Name) ಇಡುವುದನ್ನು ಒಕ್ಕಲಿಗ ಸಮುದಾಯದ ಮುಖಂಡರು ಸ್ವಾಗತಿಸಿದ್ದಾರೆ. ಕುವೆಂಪು ಅವರ ಹೆಸರನ್ನೆ ಅಂತಿಮಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Vokkaliga leaders Press Meet about Shimoga Airport Name

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಮುಖಂಡರು, ರಾಷ್ಟ್ರಕವಿ ಕುವೆಂಪು ಅವರ ಹೆಸರು (Name) ಇಡುವ ಬೆಳವಣಿಗೆ ಸ್ವಾಗತಾರ್ಹ ಎಂದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದು ಸಾಮಾನ್ಯ ವಿಮಾನವಲ್ಲ, ‘ಇಂಡಿಯಾ 1’, ಇದರ ವಿಶೇಷತೆ ಏನು ಗೊತ್ತಾ?

ಯಾರೆಲ್ಲ ಏನೇನು ಹೇಳಿದರು?

ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆ ಬಳಿಕವು ಹಲವು ಸಮುದಾಯದವರು ಹಲವು ಹೆಸರು ಇಡುವಂತೆ ಒತ್ತಾಯಿಸುತ್ತಿದ್ದಾರೆ. ಕುವೆಂಪು ಅವರ ಹೆಸರನ್ನೆ ಅಂತಿಮಗೊಳಿಸಬೇಕು. ಯಡಿಯೂರಪ್ಪ ಅವರ ಹೆಸರು ಇಡುವಂತೆ ಒತ್ತಾಯವಿತ್ತು. ಆದರೆ ತಮ್ಮ ಹೆಸರು ಬೇಡ ಕುವೆಂಪು ಅವರ ಹೆಸರು ಇಡುವಂತೆ ಹೇಳಿರುವುದು ಯಡಿಯೂರಪ್ಪ ಅವರ ದೊಡ್ಡತನ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರು ತಿಳಿಸಿದರು.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗುತ್ತಿರುವುದು ಸಂತೋಷ. ಆದರೆ ಇದಕ್ಕಾಗಿ ಭೂಮಿ ತ್ಯಾಗ ಮಾಡಿದವರನ್ನು ಮರೆಯಬಾರದು. ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಬೇಕು. ಈ ವಿಚಾರದಲ್ಲಿ ಯಾವುದೆ ಸಬೂಬು ಹೇಳುವುದು, ವಿಳಂಬ ಮಾಡುವುದು ಸರಿಯಲ್ಲ ಎಂದು ರೈತ ಮುಖಂಡ ಕೆ.ಟಿ.ಗಂಗಾಧರ್ ಒತ್ತಾಯಿಸಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಕ್ಕೆ ಹೊಸ ಹೆಸರು, ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಶಿಫಾರಸು

ಟಿ.ಪಿ.ನಾಗರಾಜ್, ಶ್ರೀಕಾಂತ್, ವಿಜಯ್ ಕುಮಾರ್, ಭಾರತೀ ರಾಮಕೃಷ್ಣ, ಸಮಿತ್ರಾ ಕೇಶವಮೂರ್ತಿ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

jnnce%20college%20shimoga

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment