SHIVAMOGGA LIVE NEWS | 15 JULY 2024
ಬೊಮ್ಮನಕಟ್ಟೆಯಲ್ಲಿ ಮೂಲ ಸೌಕರ್ಯಕ್ಕೆ ಆಗ್ರಹ
SHIMOGA : ಬೊಮ್ಮನಕಟ್ಟೆ ಬಿ ಬ್ಲಾಕ್ನಲ್ಲಿ ಮೂಲ ಸೌಕರ್ಯ ಒದಗಿಬಸೇಕು ಎಂದು ಆಗ್ರಹಿಸಿ ಕದಂಬ ಕನ್ನಡ ವೇದಿಕೆ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ (Palike) ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಬಿ ಬ್ಲಾಕ್ನ ಮೈಲಮ್ಮ ದೇಗುಲದ ಎದುರು ಚರಂಡಿ ವ್ಯವಸ್ಥೆ ಇಲ್ಲ. ರಸ್ತೆ ಸಮರ್ಪಕವಾಗಿಲ್ಲ. ಕೂಡಲೆ ಸಮಸ್ಯೆ ಪರಿಹರಿಸಬೇಕು ಎಂದು ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು. ರಾಜ್ಯಾಧ್ಯಕ್ಷ ವಿಶ್ವನಾಥ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
shivamoggalive.com
ಮಳೆಗೆ ಮನೆ ಗೋಡೆ ಕುಸಿತ
SHIMOGA : ನಿರಂತರ ಮಳೆಗೆ ಹಾರನಹಳ್ಳಿಯಲ್ಲಿ ಮನೆಯ ಗೋಡೆ ಕುಸಿದಿದೆ. ನವೀದ್ ಎಂಬುವವರ ಮನೆಯ ಒಂದು ಬದಿಯ ಗೋಡೆ ಇವತ್ತು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಇನ್ನಷ್ಟು ಮಳೆಯಾದರೆ ಮನೆ ಸಂಪೂರ್ಣ ಹಾನಿಯಾಗುವ ಸಾಧ್ಯತೆ ಇದೆ. ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
shivamoggalive.com
![]() |
ಬೊಮ್ಮನಕಟ್ಟೆಯಲ್ಲಿ ಮೂಲ ಸೌಕರ್ಯಕ್ಕೆ ಆಗ್ರಹ
SHIMOGA : ಬೊಮ್ಮನಕಟ್ಟೆ ಬಿ ಬ್ಲಾಕ್ನಲ್ಲಿ ಮೂಲ ಸೌಕರ್ಯ ಒದಗಿಬಸೇಕು ಎಂದು ಆಗ್ರಹಿಸಿ ಕದಂಬ ಕನ್ನಡ ವೇದಿಕೆ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಬಿ ಬ್ಲಾಕ್ನ ಮೈಲಮ್ಮ ದೇಗುಲದ ಎದುರು ಚರಂಡಿ ವ್ಯವಸ್ಥೆ ಇಲ್ಲ. ರಸ್ತೆ ಸಮರ್ಪಕವಾಗಿಲ್ಲ. ಕೂಡಲೆ ಸಮಸ್ಯೆ ಪರಿಹರಿಸಬೇಕು ಎಂದು ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು. ರಾಜ್ಯಾಧ್ಯಕ್ಷ ವಿಶ್ವನಾಥ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
shivamoggalive.com
ನಗರದಲ್ಲಿ ಎರಡು ದಿನಕ್ಕೊಮ್ಮೆ ಔಷಧ ಸಿಂಪಡಿಸಿ
SHIMOGA : ನಗರದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚಾಗಿವೆ. ಕೂಡಲೆ ಡೆಂಗ್ಯು ನಿಯಂತ್ರಣ ಸಂಬಂಧ ತಕ್ಷಣ ಕ್ರಮ ಕೈಗೊಳ್ಳಬೇಕು. ಎಲ್ಲಾ ವಾರ್ಡ್ಗಳಲ್ಲಿ ಎರಡು ದಿನಕ್ಕೆ ಒಮ್ಮೆ ಔಷಧ ಸಿಂಪಡಣೆ ಮಾಡಬೇಕು. ನಿರಂತರ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಅಧ್ಯಕ್ಷ ದಿನೇಶ್, ಪ್ರಧಾನ ಕಾರ್ಯದರ್ಶಿ ಸಂಕೇತ್, ನಗರ ಉಪಾಧ್ಯಕ್ಷ ಸಚಿನ್ ಗೌಡ ಸೇರಿದಂತೆ ಹಲವರು ಇದ್ದರು.
shivamoggalive.com
ಜೆಡಿಎಸ್ ಕಾರ್ಯದರ್ಶಿಯಾಗಿ ರಾಕೇಶ್ ಡಿಸೋಜಾ
SHIMOGA : ನಗರದ ಜೆಡಿಎಸ್ ಮುಖಂಡ ಅಲ್ಫೋನ್ಸ್ ರಾಕೇಶ್ ಡಿಸೋಜ ಅವರನ್ನು ಜಾತ್ಯತೀತ ಜನತಾದಳ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಜೆಡಿಎಸ್ ಅಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ನೇಮಿಸಿ ಆದೇಶಿಸಿದ್ದಾರೆ.
shivamoggalive.com
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200