ಮಂಡ್ಲಿಯಲ್ಲಿ ರಸ್ತೆ ಮೇಲೆ ಚರಂಡಿ ನೀರು, ಮನೆಗಳು ಜಲಾವೃತ, ಶಿವಮೊಗ್ಗ – ತೀರ್ಥಹಳ್ಳಿ ರಸ್ತೆ ಸಂಚಾರ ವ್ಯತ್ಯಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 21 ಅಕ್ಟೋಬರ್ 2019

72431595 947023625659058 4441209764197695488 n.jpg? nc cat=106& nc oc=AQlYg9RbN9Ny5s8RI28ZhC2m zc0CrFi7PVrBcFnJfX0WH9NNVDP Z7HJJtqQlYCqS4& nc ht=scontent.fblr1 3
ADVERTISEMENT

ಶಿವಮೊಗ್ಗ ನಗರದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದೆ. ಚರಂಡಿಗಳು ತುಂಬಿ ಹರಿದಿದ್ದು, ಕೆಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಮಂಡ್ಲಿಯಲ್ಲಿ ರಾಜಕಾಲುವೆ ನೀರು ರಸ್ತೆ ಮತ್ತು ಮನೆಗಳಿಗೆ ನುಗ್ಗಿದೆ. ರಸ್ತೆಯ ಮೇಲೆಲ್ಲ ನೀರು ನಿಂತಿದ್ದರಿಂದ ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇದರಿಂದ ಬೆಳಗ್ಗೆ ಭಾರಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಜನರು ಸಂಕಷ್ಟ ಅನುಭವಿಸಬೇಕಾಯಿತು.

ಇನ್ನ, ಮಂಡ್ಲಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ತುಂಬಿದ್ದರಿಂದ ಮಳೆ ಪ್ರಮಾಣ ಹೆಚ್ಚಾದಂತೆ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಮನೆಯೊಳಗೆ ಇದ್ದ ವಸ್ತುಗಳು ಕೊಳಚೆ ನೀರಿನಿಂದ ಹಾನಿಯಾಗಿದೆ.

ರಾಜಕಾಲುವೆ ಸ್ವಚ್ಛ ಮಾಡದೆ, ಚರಂಡಿಗಳನ್ನು ಕ್ಲೀನ್ ಮಾಡಿಸದೆ ಇರುವುದೆ ಮಳೆನೀರು ಮನೆಗಳಿಗೆ ನುಗ್ಗಲು ಕಾರಣ ಎಂದು ಮಂಡ್ಲಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಾಲಿಕೆ ಉಪಮೇಯರ್ ಎಸ್.ಎನ್.ಚನ್ನಬಸಪ್ಪ ಅವರ ವಿರುದ್ಧ ಜನರು ಆಕ್ರೋಶಗೊಂಡವರು. ಈ ವೇಳೆ, ಚರಂಡಿ ಕ್ಲೀನ್ ಮಾಡಿಸುವುದಾಗಿ ಉಪಮೇಯರ್ ಭರವಸೆ ನೀಡಿದರು.

ಕೂಡಲೆ ಮಹಾನಗರ ಪಾಲಿಕೆ ಜೆಸಿಬಿ ಮತ್ತು ಎಂಜಿನಿಯರ್’ಗಳು ಸ್ಥಳಕ್ಕೆ ಆಗಮಿಸಿದ್ದು, ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2019

Leave a Comment