ಶಿವಮೊಗ್ಗ ಲೈವ್.ಕಾಂ | SHIMOGA | 21 ಅಕ್ಟೋಬರ್ 2019

ಶಿವಮೊಗ್ಗ ನಗರದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದೆ. ಚರಂಡಿಗಳು ತುಂಬಿ ಹರಿದಿದ್ದು, ಕೆಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಮಂಡ್ಲಿಯಲ್ಲಿ ರಾಜಕಾಲುವೆ ನೀರು ರಸ್ತೆ ಮತ್ತು ಮನೆಗಳಿಗೆ ನುಗ್ಗಿದೆ. ರಸ್ತೆಯ ಮೇಲೆಲ್ಲ ನೀರು ನಿಂತಿದ್ದರಿಂದ ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇದರಿಂದ ಬೆಳಗ್ಗೆ ಭಾರಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಜನರು ಸಂಕಷ್ಟ ಅನುಭವಿಸಬೇಕಾಯಿತು.
ಇನ್ನ, ಮಂಡ್ಲಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ತುಂಬಿದ್ದರಿಂದ ಮಳೆ ಪ್ರಮಾಣ ಹೆಚ್ಚಾದಂತೆ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಮನೆಯೊಳಗೆ ಇದ್ದ ವಸ್ತುಗಳು ಕೊಳಚೆ ನೀರಿನಿಂದ ಹಾನಿಯಾಗಿದೆ.
ರಾಜಕಾಲುವೆ ಸ್ವಚ್ಛ ಮಾಡದೆ, ಚರಂಡಿಗಳನ್ನು ಕ್ಲೀನ್ ಮಾಡಿಸದೆ ಇರುವುದೆ ಮಳೆನೀರು ಮನೆಗಳಿಗೆ ನುಗ್ಗಲು ಕಾರಣ ಎಂದು ಮಂಡ್ಲಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಾಲಿಕೆ ಉಪಮೇಯರ್ ಎಸ್.ಎನ್.ಚನ್ನಬಸಪ್ಪ ಅವರ ವಿರುದ್ಧ ಜನರು ಆಕ್ರೋಶಗೊಂಡವರು. ಈ ವೇಳೆ, ಚರಂಡಿ ಕ್ಲೀನ್ ಮಾಡಿಸುವುದಾಗಿ ಉಪಮೇಯರ್ ಭರವಸೆ ನೀಡಿದರು.
ಕೂಡಲೆ ಮಹಾನಗರ ಪಾಲಿಕೆ ಜೆಸಿಬಿ ಮತ್ತು ಎಂಜಿನಿಯರ್’ಗಳು ಸ್ಥಳಕ್ಕೆ ಆಗಮಿಸಿದ್ದು, ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200