ಕೋಡಿ ಒಡೆದ ಬೊಮ್ಮನಕಟ್ಟೆ ಕೆರೆ, ಅಕ್ಕಪಕ್ಕದ ಜಮೀನಿಗೆ ನೀರು, ಬೆಳೆ ಹಾನಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020

ಬೊಮ್ಮನಕಟ್ಟೆಯಲ್ಲಿ ಕೆರೆ ಕೋಡಿ ಒಡೆದು ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗಿದೆ. ನಾಟಿ ಮಾಡಿದ್ದ ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದೆ.

ಭಾನುವಾರ ಸಂಜೆ ಸುರಿದ ಜೋರು ಮಳೆಯಿಂದ ಕೆರೆಗೆ ಭಾರಿ ಪ್ರಮಾಣದ ನೀರು ಹರಿದು ಬಂದಿದೆ. ಸೋಮಿನಕೊಪ್ಪ, ಗೆಜ್ಜೇನಹಳ್ಳಿ, ಕೋಟೆ ಗಂಗೂರು, ಬಸವನಗಂಗೂರು ಸೇರಿದಂತೆ ವಿವಿಧೆಡೆಯಿಂದ ನೀರು ಬೊಮ್ಮನಕಟ್ಟೆ ಕರೆಗೆ ಹರಿದು ಬರುತ್ತದೆ.

ಕೆರೆ ಕೋಡಿ ಒಡೆದು ಪಕ್ಕದ ಜಮೀನಿಗೆ ನೀರು ನುಗ್ಗಿದೆ. ಈಚೆಗಷ್ಟೆ ಭತ್ತದ ನಾಟಿ ಮಾಡಲಾಗಿತ್ತು. ಈಗ ಜಮೀನು ಸಂಪೂರ್ಣ ಜಲಾವೃತವಾಗಿದೆ. ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment