ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020
ಬೊಮ್ಮನಕಟ್ಟೆಯಲ್ಲಿ ಕೆರೆ ಕೋಡಿ ಒಡೆದು ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗಿದೆ. ನಾಟಿ ಮಾಡಿದ್ದ ಭತ್ತದ ಬೆಳೆ ಸಂಪೂರ್ಣ ಜಲಾವೃತವಾಗಿದೆ.
ಭಾನುವಾರ ಸಂಜೆ ಸುರಿದ ಜೋರು ಮಳೆಯಿಂದ ಕೆರೆಗೆ ಭಾರಿ ಪ್ರಮಾಣದ ನೀರು ಹರಿದು ಬಂದಿದೆ. ಸೋಮಿನಕೊಪ್ಪ, ಗೆಜ್ಜೇನಹಳ್ಳಿ, ಕೋಟೆ ಗಂಗೂರು, ಬಸವನಗಂಗೂರು ಸೇರಿದಂತೆ ವಿವಿಧೆಡೆಯಿಂದ ನೀರು ಬೊಮ್ಮನಕಟ್ಟೆ ಕರೆಗೆ ಹರಿದು ಬರುತ್ತದೆ.
ಕೆರೆ ಕೋಡಿ ಒಡೆದು ಪಕ್ಕದ ಜಮೀನಿಗೆ ನೀರು ನುಗ್ಗಿದೆ. ಈಚೆಗಷ್ಟೆ ಭತ್ತದ ನಾಟಿ ಮಾಡಲಾಗಿತ್ತು. ಈಗ ಜಮೀನು ಸಂಪೂರ್ಣ ಜಲಾವೃತವಾಗಿದೆ. ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200