ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JANUARY 2024
SHIMOGA : ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಜ.10ರಿಂದ ಎಡದಂಡೆ ಮತ್ತು ಜ.20ರಿಂದ ಬಲದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಆನ್ ಆಫ್ ಮಾದರಿ
ನಾಲೆಗಳಿಗೆ ನೀರು ಹರಿಸಲು ಆನ್ ಆಫ್ ಮಾದರಿ ಅನುಸರಿಸಲು ತೀರ್ಮಾನಿಸಲಾಗಿದೆ. ಎಡದಂಡ ನಾಲೆಗೆ ಜ.10 ರಿಂದ ನೀರು ಹರಿಸಲಾಗುತ್ತೆ. ಜ.10 ರಿಂದ 16 ದಿನ ಆನ್ ಮತ್ತು 15 ದಿನ ಆಫ್. ನಂತರ 17 ದಿನ ಆನ್, 15 ದಿನ ಆಫ್. 18 ದಿನ ಆನ್ 15 ದಿನ ಆಫ್. 20 ದಿನ ಆನ್, 15 ದಿನ ಆಫ್ ಇರುತ್ತದೆ.
ಬಲದಂಡ ನಾಲೆಗೆ ಜ.20 ರಿಂದ ನೀರು ಹರಿಸಲಾಗುತ್ತದೆ. ಮೊದಲಿಗೆ 12 ದಿನ ಆನ್, 20 ದಿನ ಆಫ್. 12 ದಿನ ಆನ್ 20 ದಿನ ಆಫ್. 14 ದಿನ ಆನ್ 20 ದಿನ ಆಫ್. 15 ದಿನ ಆನ್ 20 ದಿನ ಆಫ್ ಇರಲಿದೆ.
ಮಳೆ ಕೊರೆತೆ ಡ್ಯಾಂನಲ್ಲಿ ನೀರು ಕಡಿಮೆ
ಮಳೆ ಪ್ರಮಾಣ ಕಡಿಮೆಯಾದ್ದರಿಂದ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಸಂಗ್ರಹಣಾ ಮಟ್ಟ 186 ಅಡಿ, ಪ್ರಸ್ತುತ 35.370 ಅಡಿ ಸಂಗ್ರಹವಿದೆ. ಪ್ರಸ್ತತ ಜಲಾಶಯದಲ್ಲಿ ನೀರಾವರಿ ಬಳಕೆಗೆ 12.50 ಟಿಎಂಸಿ ನೀರಿದೆ. ಬಲದಂಡ ನಾಲೆಗೆ 2650 ಕ್ಯೂಸೆಕ್, ಎಡದಂಡ ನಾಲೆಗೆ 380 ಕ್ಯೂಸೆಕ್ ಮತ್ತು ಗೊಂದಿ ನಾಲೆ ಸೇರಿದಂತೆ ಪ್ರತಿದಿನ 0.27 ಟಿಎಂಸಿ ನೀರು ಹರಿಸಿದಲ್ಲಿ 47 ದಿನಗಳಿಗೆ ನೀರು ಹರಿಸಬಹುದಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಎರಡು ದಿನ ರೈತರಿಗೆ ತರಬೇತಿ, ಏನೆಲ್ಲ ತರಬೇತಿ ನೀಡಲಾಗುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ?
ಸಭೆಯಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ಲತಾ ಮಲ್ಲಿಕಾರ್ಜುನ್, ಬಿ.ಕೆ.ಸಂಗಮೇಶ್, ಡಿ.ಜೆ. ಶಾಂತನಗೌಡ, ಬಸವರಾಜಪ್ಪ, ಶ್ರೀನಿವಾಸ್, ಬಸವರಾಜು ಶಿವಗಂಗ, ಕಾಡಾ ಮುಖ್ಯ ಇಂಜಿನಿಯರ್ ಶಿವಾನಂದ ಬಣಕಾರ್, ಆಡಳಿತಾಧಿಕಾರಿ ಮುರಳೀಧರ್, ಅಭಿಯಂತರರು, ಅಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















