ಇಬ್ಬರು ಮಹಿಳಾ ಕಾರ್ಪೊರೇಟರ್’ಗಳ ಪೈಕಿ ಯಾರಾಗ್ತಾರೆ ಶಿವಮೊಗ್ಗದ ಮೊದಲ ಪ್ರಜೆ? ಕಡೇ ಕ್ಷಣದಲ್ಲೂ ಮೇಯರ್ ಸ್ಥಾನಕ್ಕೆ ಭಾರಿ ಪೈಪೋಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 29 ಜನವರಿ 2020

ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಬಿಜೆಪಿಯೊಳಗೆ ಮೇಯರ್ ಆಕಾಂಕ್ಷಿಗಳ ಬಿಗಿ ಪಟ್ಟು, ಮುಖಂಡರಿಗೆ ತೀವ್ರ ತಲೆ ನೋವು ತಂದಿದೆ.

2019 readers copy new

ಬಿಸಿಎಂ (ಬಿ) ಮಹಿಳೆಗೆ ಮೇಯರ್ ಸ್ಥಾನ ಮೀಸಲಾಗಿದೆ. ಬಿಜೆಪಿಯೊಳಗೆ ಇಬ್ಬರು ಪ್ರಬಲ ಆಕಾಂಕ್ಷಿಗಳಿದ್ದಾರೆ. ಈವರೆಗೂ ಮೇಯರ್ ಚುನಾವಣೆಗೆ ಸ್ಪರ್ಧಿಸಲು ಎದುರಾಗಿದ್ದ ಅಡೆತಡೆಗಳನ್ನು ನಿವಾರಿಸಿಕೊಂಡು ಬಂದಿದ್ದಾರೆ. ಇವತ್ತು ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಇಬ್ಬರು ಸ್ಪರ್ಧೆಗೆ ಸಿದ್ಧವಾಗಿರುವುದು ಬಿಜೆಪಿ ಮುಖಂಡರಿಗೆ ತಲೆ ನೋವು ತಂದಿದೆ.

ಅನಿತಾ ರವಿಶಂಕರ್’ಗೆ ಹಾದಿ ಸುಗಮ

ಬಿಜೆಪಿ ಕಾರ್ಪೊರೇಟರ್ ಅನಿತಾ ರವಿಶಂಕರ್ ಅವರ ಜಾತಿ ಪ್ರಮಾಣಪತ್ರ ರದ್ದುಗೊಳಿಸುವಂತೆ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಉಪ ವಿಭಾಗಾಧಿಕಾರಿ, ಈ ಹಂತದಲ್ಲಿ ಜಾತಿ ಪ್ರಮಾಣ ಪತ್ರ ರದ್ದುಗೊಳಿಸುವ ಅಧಿಕಾರ ತಮ್ಮ ವ್ಯಾಪ್ತಿಗೆ ಬರುವುದಿಲ್ಲ. ಕೋರ್ಟಿನಲ್ಲೇ ಪ್ರಶ್ನೆ ಮಾಡಬೇಕು ಎಂದು ಆದೇಶ ನೀಡಿದ್ದಾರೆ. ಇದರಿಂದ ಅನಿತಾ ರವಿಶಂಕರ್ ಅವರು ಮೇಯರ್ ಚುನಾವಣೆಗೆ ಸ್ಪರ್ಧಿಸಲು ಇದ್ದ ಬಹುದೊಡ್ಡ ಅಡ್ಡಿ ನಿವಾರಣೆಯಾಗಿದೆ.

ಸುವರ್ಣ ಶಂಕರ್’ಗೂ ಕಡೆ ಕ್ಷಣದಲ್ಲಿ ರಿಲೀಫ್

ಮೇಯರ್ ಸ್ಥಾನಕ್ಕೆ ಬಿಜೆಪಿಯ ಮತ್ತೊಬ್ಬ ಪ್ರಬಲ ಆಕಾಂಕ್ಷಿ ಸುವರ್ಣ ಶಂಕರ್. ಇವರ ಜಾತಿ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ರದ್ದುಗೊಳಿಸಿದ್ದರು. ಉಪ ವಿಭಾಗಾಧಿಕಾರಿ ಕ್ರಮದ ವಿರುದ್ಧ ಸುವರ್ಣ ಶಂಕರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಉಪ ವಿಭಾಗಾಧಿಕಾರಿ ಆದೇಶವನ್ನು ರದ್ದುಗೊಳಿಸಿದೆ. ಅಲ್ಲಿಗೆ ಸುವರ್ಣ ಶಂಕರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Mahanagara Palike Shivamogga 1 1

ಬಿಜೆಪಿ ಕಾರ್ಪೊರೇಟರ್’ಗಳು ಮೈಸೂರಿಗೆ ಶಿಫ್ಟ್

ಮೇಯರ್ ಸ್ಥಾನಕ್ಕೆ ಹಗ್ಗ ಜಗ್ಗಾಟ ನಡೆಯುತ್ತಿರುವ ನಡುವೆ ಬಿಜೆಪಿ ಕಾರ್ಪೊರೇಟರ್’ಗಳು ಒಗ್ಗಟ್ಟಾಗಿರಲು ನಿರ್ಧರಿಸಿ, ಮೈಸೂರಿಗೆ ತೆರಳಿದ್ದಾರೆ. ಜ.27ರಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿದ್ದರು. ಇವತ್ತು ಬೆಳಗ್ಗೆ ಕಾರ್ಪೊರೇಟರರ್’ಗಳು ಒಟ್ಟಾಗಿ ಶಿವಮೊಗ್ಗಕ್ಕೆ ಆಗಮಿಸಲಿದ್ದದು, ಚುನಾವಣಗೂ ಒಟ್ಟಿಗೆ ಬರಲಿದ್ದಾರೆ.

ಚುನಾವಣೆಗು ಮೊದಲು ಮಹತ್ವದ ಸಭೆ

ಮೇಯರ್ ಚುನಾವಣೆ ಸಂಬಂಧ ಬಿಜೆಪಿಯೊಳಗೆ ಉಂಟಾಗಿರುವ ಗೊಂದಲ ನಿವಾರಿಸಲು ಇವತ್ತು ಬಿಜೆಪಿ ಪಕ್ಷ ಮಹತ್ವದ ಸಭೆ ಕರೆದಿದೆ. ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆಕಾಂಕ್ಷಿಗಳು ಕಾನೂನು ಸಮರ ನಡೆಸುತ್ತಿದ್ದ ಕಾರಣಕ್ಕೆ, ಮುಖಂಡರು ಸಭೆ ನಡೆಸುವ ಗೋಜಿಗೆ ಕೈ ಹಾಕಿರಲಿಲ್ಲ. ಈಗ ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಹೊಣೆ ಪಕ್ಷದ್ದಾಗಿದೆ. ಇದೇ ಕಾರಣಕ್ಕೆ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.

83326137 1039561969738556 5538165968036954112 o.jpg? nc cat=101& nc ohc=8 VCPZB7YcMAX TBBsO& nc ht=scontent.fixe1 1

ಅದೃಷ್ಟ ಪರೀಕ್ಷೆಗೆ ಇಳಿದ ಕಾಂಗ್ರೆಸ್ ಪಕ್ಷ

ಬಿಜೆಪಿಯ ಒಳ ಜಗಳದಲ್ಲಿ ಕಾಂಗ್ರೆಸ್ ಪಕ್ಷ ಅದೃಷ್ಟ ಪರೀಕ್ಷೆಗೆ ಕೈ ಹಾಕಿದೆ. ಬಿಸಿಎಂ (ಬಿ) ವರ್ಗಕ್ಕೆ ಸೇರಿದ ಯಮುನಾ ರಂಗೇಗೌಡ ಅವರು ನಾಮಪತ್ರ ಸಲ್ಲಿಸಿದ್ದಾರೆ. ಒಂದು ವೇಳೆ ಕಾನೂನು ಸಮರದಲ್ಲಿ ಬಿಜೆಪಿಗೆ ಸೋಲಾದರೆ, ಕಾಂಗ್ರೆಸ್ ಕಾರ್ಪೊರೇಟರ್’ಗೆ ಪಾಲಿಕೆಯಲ್ಲಿ ಅದೃಷ್ಟ ಒಲಿಯುವ ಸಂಭವವಿತ್ತು.

ಯಾರಾಗ್ತಾರೆ ಉಪ ಮೇಯರ್?

ಮೇಯರ್ ಸ್ಥಾನದ ಪೈಪೋಟಿ ನಡುವೆ ಉಪ ಮೇಯರ್ ಸ್ಥಾನಕ್ಕೂ ಪ್ರಬಲ ಲಾಬಿ ನಡೆಯುತ್ತಿದೆ. ಸಾಮಾನ್ಯ ಮಹಿಳೆಗೆ ಉಪ ಮೇಯರ್ ಸ್ಥಾನ ಮೀಸಲಾಗಿದೆ. ಹಾಗಾಗಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಇವತ್ತು ನಡೆಯುವ ಸಭೆಯಲ್ಲಿ ಉಪ ಮೇಯರ್ ಸ್ಥಾನಕ್ಕೂ ಅಭ್ಯರ್ಥಿ ಫೈನಲ್ ಮಾಡಲಾಗುತ್ತಿದೆ. ಬಿಜೆಪಿ ಮೂಲಗಳ ಪ್ರಕಾರ ಅಚ್ಚರಿಯ ಅಭ್ಯರ್ಥಿ ಹೆಸರು ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಯಾರಿಗೆಷ್ಟಿದೆ ಸಂಖ್ಯಾ ಬಲ?

ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಬಹುಮತವಿದೆ. 35 ಸದಸ್ಯರ ಪಾಲಿಕೆಯಲ್ಲಿ, ಬಿಜೆಪಿಯ 20 ಸದಸ್ಯರಿದ್ದಾರೆ. ಕಾಂಗ್ರೆಸ್’ನ 7, ಪಕ್ಷೇತರರು 6 ಮತ್ತು ಜೆಡಿಎಸ್’ನ ಇಬ್ಬರು ಸದಸ್ಯರಿದ್ದಾರೆ. ಇವತ್ತು ಬೆಳಗ್ಗೆ 11.30ರಿಂದ ಮೇಯರ್ ಚುನಾವಣೆ ನಡೆಯಲಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2020

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

Leave a Comment