SHIVAMOGGA LIVE NEWS | 7 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪಕ್ಕದ ಸೀಟಿನಲ್ಲಿ ಕುಳಿತ ವ್ಯಕ್ತಿಯನ್ನು ಪರಿಚಿಯಿಸಿಕೊಂಡು ಶಿವಮೊಗ್ಗದ ಲಾಡ್ಜ್ಗೆ ಕರೆದೊಯ್ದು ಚಿನ್ನಾಭರಣ ದೋಚಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈಕೆ ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇನ್ನೂ ಮೂರು ಕಳ್ಳತನ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರೂಂ ನಂಬರ್ 304
ಶಿವಮೊಗ್ಗ ತಾಲೂಕು ಆಯನೂರಿನ ರೂಪಶ್ರೀ (33) ಬಂಧಿತಳು. ಡಿ.15ರಂದು ಹೊನ್ನಾವರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ವ್ಯಕ್ತಿಯೊಬ್ಬರನ್ನು ಈಕೆ ಪರಿಚಯಿಸಿಕೊಂಡಿದ್ದಳು. ಆತನನ್ನು ಎನ್.ಟಿ.ರಸ್ತೆಯ ಲಾಡ್ಜ್ ಒಂದಕ್ಕೆ ಕರೆದೊಯ್ದು 304ನೇ ನಂಬರ್ ರೂಮ್ ಪಡೆದಿದ್ದಳು. ತನ್ನೊಂದಿಗೆ ಮಲಗಬೇಕಿದ್ದರೆ ಚಿನ್ನಾಭರಣ ಹಾಕಿಕೊಂಡಿರಬಾರದು. ನಮ್ಮ ಸ್ವಾಮೀಜಿ ಹೇಳಿದ್ದಾರೆ ಎಂದು ತಿಳಿಸಿದ್ದಳು. ಇದನ್ನು ನಂಬಿದ ವ್ಯಕ್ತಿ ತನ್ನ ಮೈಮೇಲಿದ್ದ ಚಿನ್ನಾಭರಣವನ್ನು ತೆಗೆದು ತನ್ನ ಬ್ಯಾಗಿನಲ್ಲಿ ಇರಿಸಿದ್ದರು. ಬಳಿಕ ಊಟ ತರಲು ಲಾಡ್ಜ್ನಿಂದ ಹೊರ ಹೋಗಿದ್ದರು. ಆಗ ಚಿನ್ನಾಭರಣವನ್ನು ಕದ್ದುಕೊಂಡು ಮಹಿಳೆ ಪರಾರಿಯಾಗಿದ್ದಳು.
ತನಿಖೆ ನಡೆಸಿದ ಪೊಲೀಸರು
ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ರೂಪಶ್ರೀಯನ್ನು ಬಂಧಿಸಿದ್ದಾರೆ. ಲಾಡ್ಜ್ ಪ್ರಕರಣ ಸಂಬಂಧ 10 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಈಕೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮತ್ತಷ್ಟು ಕಳವು ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾಳೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದ ಬಳಿ ಒಂದು, ಪ್ಲಾಟ್ಫಾರಂ 9ರಲ್ಲಿ ಎರಡು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈಕೆಯಿಂದ 2.25 ಲಕ್ಷ ರೂ. ಮೌಲ್ಯದ 41.6 ಗ್ರಾಂ ಬಂಗಾರ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಲು ಇಲ್ಲಿ ಕ್ಲಿಕ್ ಮಾಡಿ – 18 ವರ್ಷದ ಯುವತಿಗೆ ಕೆಎಫ್ಡಿ ಪಾಸಿಟಿವ್, ಸ್ಥಿತಿ ಗಂಭೀರ
ವಿಶೇಷ ತಂಡ ರಚನೆಯಾಗಿತ್ತು
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣ ಭೇದಿಸಲು ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಮಹಿಳೆಯನ್ನು ಬಂಧಿಸಿದೆ. ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿ ಪಾಟೀಲ್, ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್, ಸಿಬ್ಬಂದಿ ಪಾಲಾಕ್ಷ ನಾಯ್ಕ, ಲಚ್ಚಾ ನಾಯ್ಕ, ಚಂದ್ರ ನಾಯ್ಕ, ನಿತಿನ್, ಪುನಿತ್ ರಾವ್, ಮಹಿಳಾ ಸಿಬ್ಬಂದಿ ಸುಮಿತಾ ಬಾಯಿ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






