ಬ್ಯಾಂಕಿನಲ್ಲಿ ಮಹಿಳೆ ಮೈಮೇಲೆ ಬಂತು ‘ದೇವರು’, 20 ಸಾವಿರ ರೂ. ಹಣಕ್ಕೆ ಪಟ್ಟು, ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 AUGUST 2023

AYANURU : ಬ್ಯಾಂಕಿಗೆ (Bank) ಬಂದ ಮಹಿಳೆಯೊಬ್ಬರು 20 ಸಾವಿರ ರೂ. ಹಣ ನೀಡುವಂತೆ ಪಟ್ಟು ಹಿಡಿದು ಸತತ ಮೂರು ಗಂಟೆ ರಂಪಾಟ ಮಾಡಿದ್ದಾಳೆ. ಮೈ ಮೇಲೆ ದೇವರು ಬಂದಿದೆ ಎಂದು ತಿಳಿಸಿ ಬ್ಯಾಂಕಿನಲ್ಲಿದ್ದವರಿಗೆ ಕೆಲಕಾಲ ಆತಂಕ ಮೂಡಿಸಿದ್ದಳು.

ಆಯನೂರಿಮ ಬ್ಯಾಂಕ್ ಒಂದರ ಗ್ರಾಹಕಿಯೊಬ್ಬಳು ಶಾಖೆಗೆ ಬಂದಿದ್ದು 20 ಸಾವಿರ ರೂ. ಚೆಕ್‌ ಕೊಟ್ಟು, ಹಣ ನೀಡುವಂತೆ ತಿಳಿಸಿದ್ದಳು. ಪರಿಶೀಲಿಸಿದಾಗ ಆಕೆಯ ಖಾತೆಯಲ್ಲಿ 2 ಸಾವಿರ ರೂ. ಮಾತ್ರ ಇತ್ತು. ಹಾಗಾಗಿ ಬ್ಯಾಂಕ್‌ ಸಿಬ್ಬಂದಿ ಹಣ ನೀಡಲು ಬರುವುದಿಲ್ಲ ಎಂದು ತಿಳಿಸಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆ ತನಗೆ 20 ಸಾವಿರ ರೂ. ಹಣ ಬೇಕೇಬೇಕು ಎಂದು ಪಟ್ಟು ಹಿಡಿದಿದ್ದಳು.

ಮೈ ಮೇಲೆ ಬಂತು ದೇವರು

ಬಹುಹೊತ್ತು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಮಹಿಳೆ ಕೊನೆಗೆ ಕೂದಲು ಕೆದರಿಕೊಂಡು ಮೈ ಮೇಲೆ ದೇವರು ಬಂದಂತೆ ಆಡಲು ಶುರು ಮಾಡಿದಳು. ಇದರಿಂದ ಬ್ಯಾಂಕ್‌ ಸಿಬ್ಬಂದಿ ಮತ್ತು ಇತರೆ ಗ್ರಾಹಕರು ಆತಂಕಕ್ಕೀಡಾದರು. ಬ್ಯಾಂಕಿನ ಮಧ್ಯದಲ್ಲಿ ಚೇರ್‌ ಹಾಕಿ ಕುಳಿತುಕೊಂಡ ಮಹಿಳೆ, ‘ನಾನು ದೇವರು, ನನಗೆ ದುಡ್ಡು ಕೊಡಿ. ಈಗ ಹೊಟ್ಟೆ ಹಸಿವಾಗುತ್ತಿದೆ’ ಎಂದು ಮಾತನಾಡಲು ಆರಂಭಿಸಿದರು.

ಇದನ್ನೂ ಓದಿ- ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಶಾಶ್ವತ ಪರಿಹಾರಕ್ಕೆ ಮಹತ್ವದ ಸಭೆ, ಸಚಿವ ಮಧು ಹೇಳಿದ್ದೇನು?

ಬ್ಯಾಂಕಿಗೆ ಪೊಲೀಸರು ದೌಡು

ವಿಚಾರ ತಿಳಿಯುತ್ತಿದ್ದಂತೆ ಕುಂಸಿ ಠಾಣೆ ಪೊಲೀಸರು ಬ್ಯಾಂಕಿಗೆ ದೌಡಾಯಿಸಿದರು. ಮಹಿಳೆಯನ್ನು ಸಮಾಧಾನಿಸಿ ಕಳುಹಿಸಲು ಯತ್ನಿಸಿದರು. ಆದರೆ ತಾನು ದೇವರು ಎಂದು ಆಕೆ ತಿಳಿಸಿ ಬ್ಯಾಂಕಿನಲ್ಲಿ ಮತ್ತಷ್ಟು ಕೂಗಾಟ ಮಾಡಿದಳು. ಆಕೆಯ ಪರಿಸ್ಥಿತಿ ಗಮನಿಸಿದ ಪೊಲೀಸರು 500 ರೂ. ಹಣ ನೀಡಲು ಮುಂದಾದರು. ಆಗ ಆಕೆ, ‘ಇದು 500 ರೂ. ನನಗೆ 20 ಸಾವಿರ ರೂ. ಹಣ ಬೇಕು’ ಎಂದು ಹಠ ಹಿಡಿದಳು.

ಇದನ್ನೂ ಓದಿ-  ಶಿವಮೊಗ್ಗದಿಂದ ವಿಮಾನ ಹಾರಾಟ ಶುರು | Shivamogga Airport

ತಾಯಿಯನ್ನು ಕರೆಯಿಸಿದ ಪೊಲೀಸರು

ಮಹಿಳೆಯ ತಾಯಿಯನ್ನು ಬ್ಯಾಂಕಿಗೆ ಕರಿಸಿದ ಪೊಲೀಸರು ಆಕೆಯನ್ನು ಸಮಾಧಾನಪಡಿಸಿದರು. ಮಹಿಳೆಯ ಅಸಹಾಯಕತೆ ಕಂಡು ಎಎಸ್‌ಐ ನಂಜುಂಡಪ್ಪ 500 ರೂ. ನೀಡಿ ಕಳುಹಿಸಿದರು. ಮಹಿಳೆ ಹೊರ ನಡೆಯುತ್ತಿದ್ದಂತೆ ಬ್ಯಾಂಕ್‌ ಸಿಬ್ಬಂದಿ ನಿಟ್ಟುಸಿರು ಬಿಟ್ಟರು. ಈಕೆ ಆಯನೂರು ಸಮೀಪದ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಪಿಎಸ್‌ಐ ಶಾಂತರಾಜ್‌, ಎಎಸ್‌ಐ ನಂಜುಂಡಪ್ಪ, ಸಿಬ್ಬಂದಿ ಲಕ್ಷ್ಮಿ, ಹೆಡ್‌ ಕಾನ್ಸ್‌ಟೇಬಲ್‌ ಸತೀಶ್‌ ಸ್ಥಳಕ್ಕೆ ಆಗಮಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 29, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment