ಆಗಸ್ಟ್‌ 10ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ 600ಕ್ಕೂ ಹೆಚ್ಚು ಮಹಿಳಾ ನ್ಯಾಯವಾದಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 7 AUGUST 2024 : ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಮಿತಿ ಮತ್ತು ಶಿವಮೊಗ್ಗ ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಆ.10ರಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10ಕ್ಕೆ ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಸಮ್ಮೇಳನ (Conference) ಹಮ್ಮಿಕೊಂಡಿದ್ದೇವೆ ಎಂದು ಸಮಿತಿಯ ಜಿಲ್ಲಾಧ್ಯಕ್ಷೆ ಸರೋಜ ಚಂಗೊಳ್ಳಿ ತಿಳಿಸಿದರು.

ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ದಕ್ಷಿಣದ ಜಿಲ್ಲೆಗಳು ಸೇರಿದಂತೆ ವಿವಿಧೆಡೆಯಿಂದ ಮಹಿಳಾ ನ್ಯಾಯವಾದಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.

ಹೈಕೋರ್ಟ್‌ ನ್ಯಾಯಮೂರ್ತಿ ನ್ಯಾ.ಶ್ಯಾಮ್‌ ಪ್ರಸಾದ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಹೈಕೋರ್ಟ್‌ ನ್ಯಾಯಮೂರ್ತಿ ನ್ಯಾ. ಎಮ್‌.ಜಿ.ಉಮಾ, ಅತಿಥಿಗಳಾಗಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್‌ ನಾಐಕ್‌, ಎಐಎಫ್‌ಡಬ್ಲುಎಲ್‌ ಅಧ್ಯಕ್ಷೆ ಶೀಲಾ ಅನೀಶ್‌, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Advocat-Saroja-Changolli-about-advocates-conference-in-Shimoga.

ಸಮ್ಮೇಳನದಲ್ಲಿ ಎರಡು ವಿಚಾರಗೋಷ್ಠಿ ಇರಲಿದೆ. ಮೊದಲ ಗೋಷ್ಠಿಯಲ್ಲಿ ಹೊಸ ಕಾಯಿದೆಗಳ ಕುರಿತು ಅರಿವು ಮೂಡಿಸಲಾಗುತ್ತದೆ. ಎರಡನೇ ವಿಚಾರಗೋಷ್ಠಿಯಲ್ಲಿ ಮಹಿಳಾ ವಕೀಲರ ವೃತ್ತಿಪರತೆಯ ಸಮಸ್ಯೆಗಳು, ಸವಾಲುಗಳು ಮತ್ತು ಪರಿಹಾರೋಪಾಯಗಳು ಚರ್ಚೆ ನಡೆಯಲಿದೆ. 600ಕ್ಕೂ ಹೆಚ್ಚು ಮಹಿಳಾ ನ್ಯಾಯವಾದಿಗಳು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿ.ಆರ್.ರಾಘವೇಂದ್ರಸ್ವಾಮಿ, ಎಸ್.ಎ. ಶ್ರೀನಿವಾಸ್, ನಂದಿನಿ, ಪ್ರಮೀಳಾ, ಪೂರ್ಣಿಮಾ, ಅಶ್ವಿನಿ, ರೇಖಾ, ವಿದ್ಯಾ ರಾಣಿ ಇದ್ದರು.

ಇದನ್ನೂ ಓದಿ ⇓

ಶಿವಮೊಗ್ಗ ಕಾಂಗ್ರೆಸ್‌ ಕಚೇರಿಗೆ ಸತ್ಯಶೋಧನಾ ಸಮಿತಿ, ಒಬ್ಬೊಬ್ಬರಿಂದಲೇ ಮಾಹಿತಿ ಸಂಗ್ರಹ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 7, 2024

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment