SHIMOGA, 7 AUGUST 2024 : ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಮಿತಿ ಮತ್ತು ಶಿವಮೊಗ್ಗ ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಆ.10ರಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10ಕ್ಕೆ ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಸಮ್ಮೇಳನ (Conference) ಹಮ್ಮಿಕೊಂಡಿದ್ದೇವೆ ಎಂದು ಸಮಿತಿಯ ಜಿಲ್ಲಾಧ್ಯಕ್ಷೆ ಸರೋಜ ಚಂಗೊಳ್ಳಿ ತಿಳಿಸಿದರು.
ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ದಕ್ಷಿಣದ ಜಿಲ್ಲೆಗಳು ಸೇರಿದಂತೆ ವಿವಿಧೆಡೆಯಿಂದ ಮಹಿಳಾ ನ್ಯಾಯವಾದಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.
![]() |
ಹೈಕೋರ್ಟ್ ನ್ಯಾಯಮೂರ್ತಿ ನ್ಯಾ.ಶ್ಯಾಮ್ ಪ್ರಸಾದ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ಎಮ್.ಜಿ.ಉಮಾ, ಅತಿಥಿಗಳಾಗಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಐಕ್, ಎಐಎಫ್ಡಬ್ಲುಎಲ್ ಅಧ್ಯಕ್ಷೆ ಶೀಲಾ ಅನೀಶ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನದಲ್ಲಿ ಎರಡು ವಿಚಾರಗೋಷ್ಠಿ ಇರಲಿದೆ. ಮೊದಲ ಗೋಷ್ಠಿಯಲ್ಲಿ ಹೊಸ ಕಾಯಿದೆಗಳ ಕುರಿತು ಅರಿವು ಮೂಡಿಸಲಾಗುತ್ತದೆ. ಎರಡನೇ ವಿಚಾರಗೋಷ್ಠಿಯಲ್ಲಿ ಮಹಿಳಾ ವಕೀಲರ ವೃತ್ತಿಪರತೆಯ ಸಮಸ್ಯೆಗಳು, ಸವಾಲುಗಳು ಮತ್ತು ಪರಿಹಾರೋಪಾಯಗಳು ಚರ್ಚೆ ನಡೆಯಲಿದೆ. 600ಕ್ಕೂ ಹೆಚ್ಚು ಮಹಿಳಾ ನ್ಯಾಯವಾದಿಗಳು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿ.ಆರ್.ರಾಘವೇಂದ್ರಸ್ವಾಮಿ, ಎಸ್.ಎ. ಶ್ರೀನಿವಾಸ್, ನಂದಿನಿ, ಪ್ರಮೀಳಾ, ಪೂರ್ಣಿಮಾ, ಅಶ್ವಿನಿ, ರೇಖಾ, ವಿದ್ಯಾ ರಾಣಿ ಇದ್ದರು.
ಇದನ್ನೂ ಓದಿ ⇓
ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಸತ್ಯಶೋಧನಾ ಸಮಿತಿ, ಒಬ್ಬೊಬ್ಬರಿಂದಲೇ ಮಾಹಿತಿ ಸಂಗ್ರಹ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200