SHIVAMOGGA LIVE NEWS | 27 FEBRUARY 2024
SHIMOGA : ಮಹಿಳೆಯರಿಗೆ ಅಗೌರವ ತೋರುವಂತೆ ಮಾತನಾಡಿದ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಸೂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಆರ್. ಮೋಹನ್ ಅವರ ನೇತೃತ್ವದಲ್ಲಿ ಮಹಿಳೆಯರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದರು.
ಈಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟ ದರ್ಶನ್, ಮಹಿಳೆಯರ ಕುರಿತು ಅವಹೇಳನ ಮಾಡಿದ್ದಾರೆ. ಸಿನಿಮಾಗಳಲ್ಲಿ ಹೆಣ್ಣನ್ನು ಗೌರವಿಸುವಂತೆ ಮಾತನಾಡುತ್ತಾರೆ. ಆದರೆ ಸಾರ್ವಜನಿಕ ಕಾರ್ಯಕ್ರಮ ಮತ್ತು ಮಾಧ್ಯಮಗಳ ಸಂದರ್ಶನದ ವೇಳೆ ಅಶ್ಲೀಲ ಅರ್ಥ ಬರುವಂತೆ ಮಾತನಾಡುತ್ತಿದ್ದಾರೆ. ಯುವ ಜನರಿಗೆ ಮಾದರಿಯಾಗಬೇಕಿದ್ದ ನಟ ಮಹಿಳೆಯರ ಕುರಿತು ಕೀಳಾಗಿ ಮಾತನಾಡಿರುವುದು ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶೃತಿ, ಆಶಾ, ಯಶೋದಮ್ಮ, ನೇತ್ರಾ, ಸುನಿತಾ, ಸೌಮ್ಯಾ, ಮಾಲಾ ಬಾಯಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಯುವನಿಧಿ ಯೋಜನೆ, ಫಲಾನುಭವಿಗಳಿಗೆ ಮಹತ್ವದ ಸೂಚನೆ, ಇದೊಂದು ಅಪ್ಡೇಟ್ ಮಾಡಿದ್ದರೆ ಹಣ ಬರಲ್ಲ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200