SHIVAMOGGA LIVE NEWS | ESHWARAPPA | 19 ಏಪ್ರಿಲ್ 2022
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎದುರಾಗಿರುವ ಸಮಸ್ಯೆ ನಿವಾರಣೆಗೆ ಮಹಿಳೆಯರು 101 ತೆಂಗಿನ ಕಾಯಿ ಹೊಡೆದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಳದಲ್ಲಿ ಮಾರಿಕಾಂಬ ಟ್ರಸ್ಟ್ ಮಹಿಳಾ ಸಂಯೋಜಕರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
40 ವರ್ಷದ ರಾಜಕೀಯ ಇತಿಹಾಸದಲ್ಲಿ ಕೆ.ಎಸ್. ಈಶ್ವರಪ್ಪ ಅವರು ಯಾವುದೇ ರೀತಿಯ ಕಪ್ಪು ಚುಕ್ಕಿ ಇಲ್ಲದಂತ ರಾಜಕಾರಣಿಯಾಗಿದ್ದರು. ಇತ್ತೀಚೆಗೆ ಕೆ.ಎಸ್. ಈಶ್ವರಪ್ಪ ಅವರಿಗೆ ಬಂದಿರುವ ದೋಷವನ್ನು ವಿಮೋಚನೆ ಮಾಡಲಿ ಎಂದು ಪ್ರಾರ್ಥಿಸಿ ಮಹಿಳಾ ಸಂಯೋಜಕರು 101 ಈಡುಗಾಯಿ ಹೊಡೆದು ದೇವಿಗೆ ಸಮರ್ಪಿಸಿದರು.
ಪಾಲಿಕೆ ಮಾಜಿ ಸದಸ್ಯೆ ಸೀತಾಲಕ್ಷ್ಮೀ, ಪಾಲಿಕೆ ಸದಸ್ಯರಾದ ಅನಿತಾ, ಲಕ್ಷ್ಮೀ ಶಂಕರನಾಯ್ಕ, ಸುನೀತಾ ಮೋಹನ್, ಮಂಜುಳಾ, ಪ್ರೀತಾ ಬಾಬು, ಕೆಂಪಮ್ಮ, ನಾಗವೇಣಿ, ಮಾಲಾ, ವರಲಕ್ಷ್ಮೀ, ಶಕುಂತಲಾ, ರಶ್ಮೀ, ಅನಿತಾ ಹಾಗೂ ಮಹಿಳಾ ಸಂಯೋಜಕರು ಹಾಜರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ESHWARAPPA
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200