ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JANUARY 2024
SHIMOGA : ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಹಿನ್ನೆಲೆ ಮಾರಿಕಾಂಬೆಯನ್ನು ನಿರ್ಮಿಸುವ ಮರ ಶುಕ್ರವಾರ ಸಂಜೆ ಶಿವಮೊಗ್ಗ ಪುರ ಪ್ರವೇಶಿಸಿತು. ಮರಕ್ಕೆ ವಿಶೇಷ ಅಲಂಕಾರ ಮಾಡಿ, ಭಕ್ತರು ಪೂಜೆ ಸಲ್ಲಿಸಿದರು.
ಮಡಿವಾಳ ಸಮಾಜದವರು ಕಾಡಿನಿಂದ ಮರವನ್ನು ಟ್ರಾಕ್ಟರ್ನಲ್ಲಿ ತಂದರು. ಮಂಡ್ಲಿಯಲ್ಲಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ಮೆರವಣಿಗೆ ಮೂಲಕ ಗಾಂಧಿ ಬಜಾರ್ನಲ್ಲಿರುವ ಮಾರಿಕಾಂಬೆಯ ತವರು ಮನೆ ವಿಶ್ವಕರ್ಮ ಸಮಾಜದವರಿಗೆ ಒಪ್ಪಿಸಲಾಯಿತು.
ಮಾರಿಕಾಂಬೆ ಮೂರ್ತಿ ಕೆತ್ತನೆ ಆರಂಭ
ತವರು ಮನೆ ಗಾಂಧಿ ಬಜಾರ್ನಲ್ಲಿ ಶಿಲ್ಪಿಗಳು ಮಾರಿಕಾಂಬೆ ದೇವಿಯ ಮೂರ್ತಿ ಕೆತ್ತನೆ ಮಾಡಲಿದ್ದಾರೆ. ಜಾತ್ರೆಗೆ ಒಂದು ವಾರ ಮುನ್ನ ಮೂರ್ತಿಗೆ ಪೂಜೆ ಸಲ್ಲಿಸಿ ಸಾರು ಹಾಕುವ ಶಾಸ್ತ್ರ ನಡೆಸಲಾಗುತ್ತದೆ. ನಗರದಾದ್ಯಂತ ಜಾತ್ರೆಗೆಯ ಮಾಹಿತಿ ಸಾರಲಾಗುತ್ತದೆ.
ಇದನ್ನೂ ಓದಿ – ಸಿಗಂದೂರು ಜಾತ್ರೆಗೆ ಅದ್ಧೂರಿ ಚಾಲನೆ, ಹೇಗಿತ್ತು ವೈಭವ? ಯಾರೆಲ್ಲ ಭಾಗವಹಿಸಿದ್ದರು?
ಮಾರ್ಚ್ನಲ್ಲಿ ನಡೆಯಲಿದೆ ಜಾತ್ರೆ
ಈ ಬಾರಿ ಮಾರಿಕಾಂಬೆ ದೇವಿ ಜಾತ್ರೆಯು ಮಾರ್ಚ್ 12 ರಿಂದ 16ರವರೆಗೆ ನಡೆಯಲಿದೆ. ಮಾ.12ರಂದು ತವರು ಮನೆ ಗಾಂಧಿ ಬಜಾರ್ ಕಾಳಿಕಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಮರುದಿನ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿರುವ ಗದ್ದುಗೆ ಮೇಲೆ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಮಾರ್ಚ್ 16ರಂದು ರಾಜಬೀದಿ ಉತ್ಸವದ ಮೂಲಕ ದೇವಿಯನ್ನು ಕಾಡಿಗೆ ಬಿಟ್ಟು ಬರಲಾಗುತ್ತದೆ.
ಇದನ್ನೂ ಓದಿ – ಜಾತ್ರೆಯಲ್ಲಿ ರಥ ಎಳೆದು, ಅಂಗಡಿಗಳಿಗೆ ಭೇಟಿ ನೀಡಿದ ಮಿನಿಸ್ಟರ್, ಕಲಾವಿದರ ನೋವು ಆಲಿಸಿ ಸ್ಥಳದಲ್ಲೇ ನೆರವು
ಮರ ತರುವ ಶಾಸ್ತ್ರದ ಸಂದರ್ಭ ದೇಗುಲ ಸಮಿತಿ ಅಧ್ಯಕ್ಷ ಎಸ್.ಕೆ.ಮರಿಯಪ್ಪ, ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್, ಸುನಿಲ್, ಪ್ರಭಾಕರ್, ಉಮಾಪತಿ ಸೇರಿದಂತೆ ಹಲವರು ಇದ್ದರು.
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






