SHIVAMOGGA LIVE NEWS
THIRTHAHALLI | ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರ ಕೂಡಲೆ ವಿಜ್ಞಾನಿಗಳನ್ನು (SCIENTISTS) ತೋಟಗಳಿಗೆ ಕಳುಹಿಸಬೇಕು. ಈಗ ಘೋಷಣೆ ಮಾಡಿರುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂದು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಯಡೂರು ರಾಜಾರಾಂ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡೂರು ರಾಜಾರಾಂ ಅವರು, ಎಲೆಚುಕ್ಕಿ ರೋಗವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದಂತೆ ತೋರುತ್ತಿಲ್ಲ. ಪ್ರತಿ ಹೆಕ್ಟೇರ್ ನಷ್ಟಕ್ಕೆ 4 ಸಾವಿರ ರೂ. ಪರಿಹಾರ ಬಿಡುಗಡೆ ಮಾಡಲು ನಿರ್ಧರಿಸಿದೆ. ಆದರೆ ಇದು ಯಾವುದಕ್ಕೂ ಸಾಲುವುದಿಲ್ಲ. ಕೂಡಲೆ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಎಸಿ ರೂಂ ಬಿಟ್ಟು ಹೊರ ಬರಲಿ (SCIENTISTS)
ಎಲೆ ಚುಕ್ಕಿ ರೋಗ ನಿಯಂತ್ರಣ ಕುರಿತು ವಿಜ್ಞಾನಿಗಳು (SCIENTISTS) ಸಂಶೋಧನೆ ನಡೆಸಬೇಕು. ಆದರೆ ಅವರು ಎಸಿ ಕಚೇರಿಗಳನ್ನು ಬಿಟ್ಟು ಹೊರಗೆ ಬರುತ್ತಿಲ್ಲ. ವಿಜ್ಞಾನಿಗಳು ಸಣ್ಣ ಸಣ್ಣ ರೈತರ ತೋಟಗಳಿಗೆ ಬಂದು ಪರಿಶೀಲನೆ ನಡೆಸಿ, ಈ ರೋಗ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದು ಯಡೂರು ರಾಜಾರಾಂ ಆಗ್ರಹಿಸಿದರು.
‘ಮೀಸೆ ಬಿಟ್ಟುಕೊಂಡು ಓಡಾಡೋ ಸಚಿವರು’ (SCIENTISTS)
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಾರದಲ್ಲಿ ಆರು ದಿನ ತೀರ್ಥಹಳ್ಳಿಯಲ್ಲಿ ಇರುತ್ತಾರೆ. ಅವರು ಎಲೆ ಚುಕ್ಕಿ ರೋಗದ ಕುರಿತು ಗಮನ ವಹಿಸಬೇಕು. ಇನ್ನು, ಕೃಷಿ ಸಚಿವರು ಮೀಸೆ ಬಿಟ್ಟುಕೊಂಡು ಓಡಾಡುತ್ತಿದ್ದಾರೆ. ಅವರಿಗೆ ಮಲೆನಾಡಿನ ಮಣ್ಣಿನ ವಾಸನೆ ಮತ್ತು ಇಲ್ಲಿಯ ಸಮಸ್ಯೆಗಳು ಗೊತ್ತಿಲ್ಲ. ಸಚಿವರು ಬಂದಾಗ ಮಾತ್ರ ಅಧಿಕಾರಿಗಳು ಬರುತ್ತಾರೆ. ಕೆಡಿಪಿ ಸಭೆಗಳಲ್ಲಿ ಫೈಲ್ ಹಿಡಿದು ಓಡಾಡುತ್ತಾರೆ. ಹೀಗೆ ಮುಂದುವರೆದ ಅಧಿಕಾರಿಗಳ ಹೆಸರು ಬರೆದಿಡಬೇಕಾಗುತ್ತದೆ ಎಂದು ಯಡೂರು ರಾಜಾರಾಂ ಎಚ್ಚರಿಸಿದರು.
ತೋಟಗಳಿಗೆ ಕುಮಾರಸ್ವಾಮಿ ಭೇಟಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅ.26 ಮತ್ತು 27ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ಕೆಲವು ರೈತರ ತೋಟಗಳಿಗೆ ತೆರಳಿ ಎಲೆ ಚುಕ್ಕಿ ರೋಗದ ಕುರಿತು ಮಾಹಿತಿ ಪಡೆಯಲಿದ್ದಾರೆ. ಆತ್ಮಹತ್ಯೆಗೆ ಶರಣಾದ ನಗರ ಹೋಬಳಿಯ ಕಿಳಂದೂರು ಗ್ರಾಮದ ರೈತ ಕೃಷ್ಣಪ್ಪ ಗೌಡ ಅವರ ಮನೆಗೂ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಮುಖಂಡ ವಿಶ್ವನಾಥ ಕಾಚಿನಕಟ್ಟೆ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಚೀಲದಲ್ಲಿ ತುಂಬಿಟ್ಟಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ, ಹೇಗಾಯ್ತು ಕಳ್ಳತನ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.