SHIVAMOGGA LIVE NEWS | SHIMOGA | 15 ಏಪ್ರಿಲ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿಯೆ ಇದ್ದರೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ಅವರು ಮುಖಾಮುಖಿಯಾಗಲಿಲ್ಲ. ಇದು ಕಾರ್ಯಕರ್ತರ ಮಧ್ಯೆ ಚರ್ಚೆಗೆ ಕಾರಣವಾಯಿತು.
ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರು ಇವತ್ತು ಶಿವಮೊಗ್ಗ ನಗರದಲ್ಲಿಯೆ ಇದ್ದರು. ಇಬ್ಬರು ಒಂದೇ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೂ ಮುಖಾಮುಖಿಯಾಗಲಿಲ್ಲ.
ಬಿಜೆಪಿ ಕಚೇರಿಗೆ ಭೇಟಿ
ಬಿಜೆಪಿ ಜಿಲ್ಲಾ ಕಚೇರಿ ಹಿಂಭಾಗ ನಗರ ಮತ್ತು ಗ್ರಾಮಾಂತರ ಬಿಜೆಪಿಯ ಪ್ರತ್ಯೇಕ ಕಚೇರಿಗಳನ್ನು ಆರಂಭಿಸಲಾಗಿದೆ. ಇವತ್ತು ಇವೆರಡು ಕಚೇರಿಗಳ ಉದ್ಘಾಟನೆ ಇತ್ತು. ಈ ಕಾರ್ಯಕ್ರಮಕ್ಕೆ ಸಚಿವ ಈಶ್ವರಪ್ಪ ಅವರು ಆಗಮಿಸಿ, ಕೆಲವು ನಿಮಿಷದ ಬಳಿಕ ಮರಳಿದರು. ಇದಾಗಿ ಕೆಲವೆ ಹೊತ್ತಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿ ಕಚೇರಿಗೆ ಆಗಮಿಸಿ, ನೂತನ ಕಚೇರಿ ಉದ್ಘಾಟಿಸಿದರು.
ಖಾಸಗಿ ಕಾರ್ಯಕ್ರಮದಲ್ಲೂ ಭೇಟಿ ಇಲ್ಲ
ಖಾಸಗಿ ಶಾಲೆಯೊಂದರ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಅತಿಥಿಗಳಾಗಿದ್ದರು. ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ಈಶ್ವರಪ್ಪ ಅವರು ಕಾರ್ಯಕರ್ತರ ಭೇಟಿ, ಬೆಂಗಳೂರಿಗೆ ತೆರಳಬೇಕಿತ್ತು. ಹಾಗಾಗಿ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುಬೇಕಾದ ಸಂಕಷ್ಟದ ಪರಿಸ್ಥಿತಿ. ಇಂತಹ ಸಂದರ್ಭ ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಬಹುದು ಎಂದು ಕಾರ್ಯಕರ್ತರು ನಿರೀಕ್ಷಿಸಿದ್ದರು. ಆದರೆ ಇಬ್ಬರು ಮುಖಾಮುಖಿ ಆಗದಿರುವುದು ಭೇಟಿಯಾಗದಿರುವುದು ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ | ರಾಜೀನಾಮೆ ಬಳಿಕ ಮುಂದೇನು, ಕಾರ್ಯಕರ್ತರ ಸಭೆಯಲ್ಲಿ ಪ್ಲಾನ್ ಬಿಚ್ಚಿಟ್ಟ ಈಶ್ವರಪ್ಪ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






