Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

18/05/2025 9:29 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ: ಲೋಕಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಕುವೆಂಪು ರಂಗಮಂದಿರದಲ್ಲಿ ಶನಿವಾರ ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ದಿವಂಗತ ಹಿರಿಯೂರು ಕೃಷ್ಣಮೂರ್ತಿ ಅವರ ಸಂಸ್ಮರಣಾ ಗ್ರಂಥ ‘ಕೃಷ್ಣ ಸ್ಮೃತಿ’ ಪುಸ್ತಕ ಬಿಡುಗಡೆ (Book Release) ಸಮಾರಂಭದಲ್ಲಿ ಯಡಿಯೂರಪ್ಪ, ಈಶ್ವರಪ್ಪ ಒಟ್ಟಿಗೆ ಭಾಗವಹಿಸಿದ್ದರು.

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ‘ಕೃಷ್ಣ ಸ್ಮೃತಿ’ ಪುಸ್ತಕ ಬಿಡುಗಡೆ ಮಾಡಿದರು.

ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು?

  • ಹಿರಿಯೂರು ಕೃಷ್ಣಮೂರ್ತಿ ಅವರದ್ದು ಮೇರು ವ್ಯಕ್ತಿತ್ವ, ಅನುಕರಣಿಯ. ಅವರು ಗತಿಸಿದ 21 ವರ್ಷದ ಬಳಿಕ ಪುಸ್ತಕ ಪ್ರಟಕಗೊಂಡಿದ್ದರೂ ಸಾಂದರ್ಭೋಚಿತವಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

  • ಮರಣ ಯಾವಾಗ ಬೇಕಿದ್ದರು ಬರಬಹುದು. ಆದರೆ ನ್ಯಾಯ, ಧರ್ಮ, ಶ್ರೇಷ್ಠ ಜೀವನ ಮೌಲ್ಯಗಳನ್ನು ಬಿಡದೇ ಮುನ್ನಡೆಯುವವನು ಧೀರ ಎಂಬ ಭರ್ತೃಹರಿಯ ಮಾತಿನಂತಹ ವ್ಯಕ್ತಿತ್ವ ಹಿರಿಯೂರು ಕೃಷ್ಣಮೂರ್ತಿ ಅವರದ್ದು.

SLV-BOOK-SHOP-SHIMOGA

  • ಬರೀ ರಾಮನ ಸ್ಮರಣೆಯಿಂದ ಆತನ ದರ್ಶನ ಆಗೊಲ್ಲ. ಬದಲಿಗೆ ರಾಮನ ಕೆಲಸ ಮಾಡಿದರೆ ರಾಮನ ದರ್ಶನ ಸಾಧ್ಯ ಎಂಬ ಹನುಮಂತನ ಉಪದೇಶ ನಮಗೆಲ್ಲರಿಗೂ ಮಾರ್ಗದರ್ಶಿಯಾಗಲಿ.

Yedyurappa-and-Eshwarappa-at-a-book-release-event.

  • ಬೇರೆಯವರಿಗೂ ಎಂದಿಗೂ ಸಂಕಟ ಕೊಡದಿರುವುದು. ಸಮಾಜದ ಕಂಟಕರಿಗೆ ತಲೆ ಬಾಗದಿರುವುದು ಹಿರಿಯೂರು ಕೃಷ್ಣಮೂರ್ತಿ ಅವರ ವ್ಯಕ್ತಿತ್ವ. ತ್ಯಾಗ ಮಾಡುವವರು ಅಮರತ್ವ ಪಡೆಯುತ್ತಾರೆ.

Sarkari-Naukarara-Sanga-Sports-

ಆನೆ ಬದುಕಿದ್ದಾಗ ಎಷ್ಟು ಬೆಲೆಯೋ ಕಾಲವಾದ ಬಳಿಕ ಅದಕ್ಕಿಂತ ಅಮೂಲ್ಯವಾಗಿರುತ್ತದೆ. ವ್ಯಕ್ತಿ ಕಾಲವಾದ ನಂತರವೂ ಅವನ ನೆರಳು ಎಷ್ಟು ದೂರ ಚಾಚುತ್ತದೆ ಎಂಬುದು ಆತನ ಮಹಾನತೆಯ ಅಳತೆಗೋಲು. ಕಾಲವಾಗಿ 21 ವರ್ಷಗಳ ನಂತರವೂ ಹಿರಿಯೂರು ಕೃಷ್ಣಮೂರ್ತಿ ಅವರ ಮಹಾನತೆಯನ್ನು ಎತ್ತಿ ತೋರುತ್ತದೆ.ಸು.ರಾಮಣ್ಣ, ಆರ್‌ಎಸ್‌ಎಸ್‌ ಹಿರಿಯ ಪ್ರಚಾರಕ

ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ

JNNCE-ADMISSION-2025-26

ಲೋಕಸಭೆ ಚುನಾವಣೆ ನಂತರ ಯಡಿಯೂರಪ್ಪ ಮತ್ತು ಈಶ್ವರಪ್ಪ ಇದೇ ಮೊದಲ ಬಾರಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಆದರೆ ಪರಸ್ಪರ ಮಾತನಾಡಲಿಲ್ಲ. ಕಾರ್ಯಕ್ರಮ ಆರಂಭಕ್ಕು ಮೊದಲು ವೇದಿಕೆ ಮುಂಭಾಗ ದತ್ತಾತ್ರೇಯ ಹೊಸಬಾಳೆ ಅವರ ಅಕ್ಕಪಕ್ಕದಲ್ಲಿ ಕುಳಿತಿದ್ದರು.

Yedyurappa-and-Eshwarappa-at-a-book-release-event.

ಕಾರ್ಯಕ್ರಮದ ಉದ್ಘಾಟನೆ ಸಂದರ್ಭ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ವೇಳೆ ಯಡಿಯೂರಪ್ಪ, ಈಶ್ವರಪ್ಪ ಅಕ್ಕಪಕ್ಕದಲ್ಲಿಯೇ ನಿಂತಿದ್ದರು. ಆದರೆ ಮಾತನಾಡದೆ ಮೌನವಾಗಿದ್ದರು. ಭಾಷಣದ ವೇಳೆ ಈ‍ಶ್ವರಪ್ಪ ಅವರು ಶಿವಮೊಗ್ಗದಲ್ಲಿನ ಹಿಂದಿನ ಹೋರಾಟಗಳನ್ನು ಸ್ಮರಿಸಿಕೊಂಡರು. ಈ ಸಂದರ್ಭ ಐದಾರು ಬಾರಿ ಯಡಿಯೂರಪ್ಪ ಅವರ ಹೆಸರನ್ನು ಹೇಳಿದರು.

ಇವತ್ತು ರಾಜಕೀಯ ಕ್ಷೇತ್ರದಲ್ಲಿ ನಾನೇನಾದರೂ ಸಾಧಿಸಿದ್ದರೆ, ಸ್ಥಾನಮಾನಗಳನ್ನು ಪಡೆದಿದ್ದರೆ ಅದಕ್ಕೆ ಕಾರಣರಾದವರಲ್ಲಿ ಹಿರಿಯೂರು ಕೃಷ್ಣಮೂರ್ತಿ ಕೂಡ ಒಬ್ಬರು. ವಿಸ್ತಾರವಾಗುತ್ತಾ ಹೋಗುವುದೇ ಜೀವನ, ಸಂಕುಚಿತವಾಗುತ್ತಾ ಹೋಗುವುದೇ ಮರಣ ಎಂಬ ಸ್ವಾಮಿ ವಿವೇಕಾನಂದರ ಆಶಯದಂತೆ ಸದಾ ವಿಸ್ತಾರವಾಗುತ್ತಾ ಬೆಳೆದವರು ನನ್ನ ಹಿರಿಯಣ್ಣ ಹಿರಿಯೂರು ಕೃಷ್ಣಮೂರ್ತಿ.

– ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತಾವೂ ಹಾಗೂ ಯಡಿಯೂರಪ್ಪ ಸ್ಕೂಟರ್‌ನಲ್ಲಿ ಓಡಾಡಿ ಚಂದಾ ಹಣ ಸಂಗ್ರಹಿಸಿ 25 ಸಾವಿರ ಜನ ಸೇರಿಸಿ ಶಿವಮೊಗ್ಗದಲ್ಲಿ ರೈತರ ಸಮಾವೇಶ ಮಾಡಲು ಕೃಷ್ಣಮೂರ್ತಿ ಮಾರ್ಗದರ್ಶನ ನೀಡಿದ್ದರು. ಕೆ.ಹೆಚ್.ಶ್ರೀನಿವಾಸ್ ವಿರುದ್ಧ ನಾನು ಚುನಾವಣೆಗೆ ನಿಂತು ಎಂಎಲ್‌ಎ ಆಗಲು ಅವರೇ ಪ್ರೇರಣೆ.

– ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ

ರಾಷ್ಟ್ರೀಯ ಸ್ವಯಂ ಸೇವಾ ಸಂಘ ವ್ಯಕ್ತಿಗಳ ತಯಾರು ಮಾಡುತ್ತದೆ. ವ್ಯಕ್ತಿಗಳು ಸಮಾಜವನ್ನು ತಯಾರು ಮಾಡುತ್ತಾರೆ. ಅಂತಹ ವ್ಯಕ್ತಿಗಳಲ್ಲೊಬ್ಬರಾದ ಕೃಷ್ಣಮೂರ್ತಿ ಸಮಾಜವನ್ನು ತಯಾರು ಮಾಡಿದವರು.

– ಡಿ.ಹೆಚ್.ಶಂಕರಮೂರ್ತಿ, ಮಾಜಿ ಸಭಾಪತಿ

ಒಡಿಸ್ಸಾ ಕೇಂದ್ರೀಯ ವಿವಿ ಕುಲಾಧಿಪತಿ ಪ್ರೊ. ಪಿ.ವಿ.ಕೃಷ್ಣಭಟ್‌, ಹಿರಿಯ ಪ್ರಚಾರಕ ಭ.ಮ.ಶ್ರೀಕಂಠ, ಟಿ.ಪಟ್ಟಾಭಿರಾಮ್, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ಎಂಎಲ್‌ಸಿ ಸಿ.ಟಿ.ರವಿ, ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ರೈಲು ಕುರಿತು ರೈಲ್ವೆ ಇಲಾಖೆಯಿಂದ ಮಹತ್ವದ ಪ್ರಕಟಣೆ

Yedyurappa-and-Eshwarappa-at-a-book-release-event.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article shimoga-to-bangalore-jan-shatabdi-train-railway.webp ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ರೈಲು ಕುರಿತು ರೈಲ್ವೆ ಇಲಾಖೆಯಿಂದ ಮಹತ್ವದ ಪ್ರಕಟಣೆ
Next Article Indina-Panchanga-today Panchanga ದಿನ ಪಂಚಾಂಗ | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?

ಇದನ್ನೂ ಓದಿ

Shimoga-News-update
SHIVAMOGGA CITY

ಇಂದು, ನಾಳೆ ಶಿವಮೊಗ್ಗದಲ್ಲಿ ಎನ್‌ಇಎಸ್‌ ಹವ್ಯಾಸಿ ರಂಗತಂಡದಿಂದ ನಾಟಕ, ಎಲ್ಲೆಲ್ಲಿ ಪ್ರದರ್ಶನ ಇರಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
tunga-dam-water-release-and-mantapa-in-shimoga
SHIVAMOGGASHIVAMOGGA CITY

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ವಿವಿಧೆಡೆ ಜೂನ್‌ 17, 18ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
021023 Gandhi Bazaar during 144 section in Shimoga
CRIME DIARYSHIVAMOGGA CITY

ಗಾಂಧಿ ಬಜಾರ್‌ ಬಟ್ಟೆ ಮಾರುಕಟೆಯಿಂದ ಹೊರ ಬಂದ ಕೆಲಸಗಾರನಿಗೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/06/2025
bike theft reference image
CRIME DIARYSHIVAMOGGA CITY

ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಪಲ್ಸರ್‌ ನಾಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/06/2025
Crime-News-General-Image
CRIME DIARYSHIVAMOGGA CITY

ಗಾಂಧಿ ಬಜಾರ್‌ಗೆ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾದ ವ್ಯಕ್ತಿ, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?