ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 MARCH 2023
SHIMOGA : ಯುವಕರ ಗುಂಪೊಂದು ಅಂಗಡಿಯೊಂದಕ್ಕೆ (Shop) ನುಗ್ಗಿ ಮುಚ್ಚಿನಿಂದ ಹೊಡೆದು ವಸ್ತುಗಳನ್ನು ಹಾನಿ ಮಾಡಿದೆ. ಸಮೀಪದಲ್ಲೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಹಾಕಿದೆ. ಅಲ್ಲದೆ ದಾರಿಯಲ್ಲಿ ಬರುತ್ತಿದ್ದ ಯುವಕನೊಬ್ಬನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.

ಶಿವಮೊಗ್ಗದ ಬುದ್ಧಾನಗರದ 3ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಈ ರಸ್ತೆಯಲ್ಲಿರುವ ಗಂಗಾಧರ್ ಎಂಬುವವರ ಅಂಗಡಿಗೆ (Shop) ನುಗ್ಗಿದ ಮೂವರು ಯುಕವರು ದಾಂಧಲೆ ನಡೆಸಿದ್ದಾರೆ. ಕೈಯಲ್ಲಿ ಮಚ್ಚು ಹಿಡಿದು ಬಂದಿದ್ದ ಯುವಕರು ಅಂಗಡಿಯಲ್ಲಿದ್ದ ವಸ್ತುಗಳ ಮೇಲೆ ದಾಳಿ ನಡೆಸಿ, ಚಲ್ಲಾಪಿಲ್ಲಿಗೊಳಿಸಿದ್ದಾರೆ. ಗಂಗಾಧರ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಅಂಗಡಿ ಪಕ್ಕದಲ್ಲಿಯೇ ನಿಲ್ಲಿಸಿದ್ದ ಕಿಯಾ ಕಾರಿನ ಹಿಂಬದಿ ಗಾಜನ್ನು ಒಡೆದು ಹಾಕಿದ್ದಾರೆ. ಬಳಿಕ ರಸ್ತೆಯಲ್ಲಿ ಜೋರಾಗಿ ಕೂಗಿಕೊಂಡು ಹೋಗುತ್ತಿದ್ದು, ಎದುರಿನಿಂದ ಬರುತ್ತಿದ್ದ ಸೈಯದ್ ಮೊಹಿದ್ದೀನ್ ಎಂಬ ಯುವಕನ ಮೇಲೆ ದಾಳಿ ನಡೆಸಿದ್ದಾರೆ. ಆತ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ – ಕಾಲೇಜು ಲೆಕ್ಚರರ್ಗೆ ರಸ್ತೆಯಲ್ಲಿ ಚಾಕು ತೋರಿಸಿ ಬೆದರಿಕೆ, ದರೋಡೆ
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



