ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಸೆಂಚುರಿ ಬಾರಿಸಿ ಬ್ಯಾಟ್ ಮೇಲೆತ್ತಿದ ‘ಮೋದಿ’

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JUNE 2021
➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಪೆಟ್ರೋಲ್ ಬಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆಗಳು ಮುಂದುವರೆದಿವೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಯುವ ಕಾಂಗ್ರೆಸ್‍ನ ದಕ್ಷಿಣ ಬ್ಲಾಕ್ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಸೆಂಚುರಿ ಬಾರಿಸಿದ ಕ್ರಿಕೆಟಿಗನಂತೆ ಬ್ಯಾಟ್ ಮೇಲೆತ್ತಿ ಪ್ರತಿಭಟನೆ ನಡೆಸಲಾಯಿತು. ಅಚ್ಛೇ ದಿನದ ಆಸೆ ತೋರಿಸಿದ್ದ ನರೇಂದ್ರ ಮೋದಿ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಮುಖವಾಡ ಧರಿಸಿ, ಕ್ರಿಕೆಟಿಗನಂತೆ ಬ್ಯಾಟ್ ಹಿಡಿದು ಬಂದಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತನೊಬ್ಬ, ಸೆಂಚುರಿ ಬಾರಿಸಿದಂತೆ ಬ್ಯಾಟ್ ಮೇಲೆತ್ತಿ ಆಕ್ರೋಶ ವ್ಯಕ್ತಪಡಿಸಿದ.

ಪ್ರತಿಭಟನೆಯ ವಿಡಿಯೋ ರಿಪೋರ್ಟ್ ಇಲ್ಲಿದೆ

ಕಾರ್ಪೊರೇಟರ್‍ ರಮೇಶ್ ಹೆಗ್ಡೆ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್.ಕೆ, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಪ್ರಮುಖರಾದ ಗಿರೀಶ್, ಮಹಮ್ಮದ್ ನಿಹಾಲ್, ಬಾಲಾಜಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!