ಶಿವಮೊಗ್ಗ ಲೈವ್.ಕಾಂ | SHIMOGA | 27 ಸೆಪ್ಟೆಂಬರ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ವೈದ್ಯರ ನಿರ್ಲಕ್ಷ್ಯಕ್ಕೆ ಶಿವಮೊಗ್ಗ ವಿದ್ಯಾನಗರದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರತಾಪ್ ಸಿಂಗ್ (23) ಮೃತ ಯುವಕ. ಮೂರು ವರ್ಷದ ಹಿಂದೆ ಅಪಘಾತಕ್ಕೀಡಾಗಿ ಪ್ರತಾಪ್ ಸಿಂಗ್ ಗಾಯಗೊಂಡಿದ್ದರು. ಅದರ ಮುಂದುವರೆದ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸೆ.24ರಂದು ಆಪರೇಷನ್ ಮಾಡಲಾಗಿತ್ತು. ಮರುದಿನ ಪ್ರತಾಪ್ ಸಿಂಗ್’ನನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಮನೆಗೆ ಹಿಂತಿರುಗುವಾಗ ಪ್ರತಾಪ್ ಸಿಂಗ್ ಹಲವು ಬಾರಿ ವಾಂತಿ ಮಾಡಿಕೊಂಡಿದ್ದಾನೆ. ಪ್ರತಾಪ್ ಸಿಂಗ್ ಅಸ್ವಸ್ಥಗೊಂಡಿರುವ ವಿಚಾರ ತಿಳಿಯುತ್ತಿದ್ದಂತೆ ಚಿಕಿತ್ಸೆ ನೀಡಿದ ವೈದ್ಯರು ಮಾತ್ರೆ ತೆಗೆದುಕೊಳ್ಳುವಂತೆ ವಾಟ್ಸಪ್ ಮಾಡಿದ್ದರು. ಆ ಮಾತ್ರೆ ಸೇವಿಸಿ ಮಲಗಿದ್ದ ಪ್ರತಾಪ್ ಸಿಂಗ್’ಗೆ ಉಸಿರಾಟದ ಸಮಸ್ಯೆ ಎದುರಾಗಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗೆ ಕರೆದೊಯ್ದಾಗ ಪ್ರತಾಪ್ ಸಿಂಗ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಮತ್ತು ಸಂಬಂಧಿಕರು ಮಣಿಪಾಲ ಆಸ್ಪತ್ರೆ ಮತ್ತು ವೈದ್ಯರ ವಿರುದ್ಧ ದೂರು ನೀಡಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






