SHIMOGA, 27 JULY 2024 : ಅಂಗಡಿಯಲ್ಲಿ ಹಣ ಕೊಡದೆ ಮದ್ಯ ಕೊಡುವುದಿಲ್ಲ ಎಂದು ಹೇಳಿದ್ದಕ್ಕೆ ಯುವಕನೊಬ್ಬ ರೊಚ್ಚಿಗೆದ್ದು ಏಕಾಂಗಿಯಾಗಿ ‘ಹೆದ್ದಾರಿ ತಡೆ’ (Highway) ನಡೆಸಿದ್ದಾನೆ. ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ಯುವಕನೊಬ್ಬ ಅವಾಂತರ ಸೃಷ್ಟಿಸಿದ್ದಾನೆ.
ಶುಕ್ರವಾರ ಮಧ್ಯಾಹ್ನ ಮದ್ಯದ ಅಂಗಡಿಗೆ ತೆರಳಿದ್ದ ಯುವಕನಿಗೆ ಅಂಗಡಿಯವರು ಮದ್ಯ ಕೊಡಲು ನಿರಾಕರಿಸಿದ್ದಾರೆ. ಹಣ ಕೊಟ್ಟರಷ್ಟೆ ಮದ್ಯ ಕೊಡುವುದಾಗಿ ತಿಳಿಸಿದ್ದಾರೆ. ಇದರಿಂದ ರೊಚ್ಚಿಗೆದ್ದ ಯುವಕ ಸುರಿವ ಮಳೆಯಲ್ಲಿ ದಿಢೀರನೆ ಎನ್.ಟಿ.ರಸ್ತೆಗೆ ಬಂದು ನಿಂತಿದ್ದ. ಸುಮಾರು 15 ನಿಮಿಷ ಈತನ ಅವಾಂತರ ಮುಂದುವರೆದಿತ್ತು.
ಯುವಕನ ಅವಾಂತರಕ್ಕೆ ವಾಹನ ಸವರಾರು ಪರದಾಡಬೇಕಾಯ್ತು. ಬಸ್ ಕಂಡಕ್ಟರ್ಗಳು ಆತನನ್ನು ಬದಿಗೆ ಎಳೆದು ತಮ್ಮ ಬಸ್ಸುಗಳು ಮುಂದಕ್ಕೆ ಸಾಗುವಂತೆ ನೋಡಿಕೊಳ್ಳುತ್ತಿದ್ದರು. ಕೊನೆಗೆ ಸ್ಥಳೀಯರು ಯುವಕನಿಗೆ ಬೆದರಿಸಿ, ತಿಳಿ ಹೇಳಿ ರಸ್ತೆಯಿಂದ ಪಕ್ಕಕ್ಕೆ ಸರಿಸಿದರು. ಯುವಕನ ಅವಾಂತರವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ ⇓
ಶಿವಮೊಗ್ಗದಲ್ಲಿ ರಸ್ತೆ ಬದಿ ಮಹಿಳೆಯ ಮೃತದೇಹ | ಪೊಲೀಸ್ ಸಿಬ್ಬಂದಿಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200