SHIVAMOGGA LIVE NEWS, 9 DECEMBER 2024
ಶಿವಮೊಗ್ಗ : ಅನಾರೋಗ್ಯ ಪೀಡಿತ ಆರು ದಿನದ ನವಜಾತ ಶಿಶುವನ್ನು ಜೀರೋ ಟ್ರಾಫಿಕ್ನಲ್ಲಿ (Zero Traffic) ಮಣಿಪಾಲ್ ಆಸ್ಪತ್ರೆಗೆ ಭಾನುವಾರ ರವಾನೆ ಮಾಡಲಾಯಿತು. ಉಸಿರಾಟ ಸಂಬಂಧಿ ಕಾಯಿಲೆಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಶಿಶುವಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಸಾಗರ ಮೂಲದ ಸುಮಂಗಳಾ ಹಾಗೂ ಲೋಕೇಶ್ ದಂಪತಿಗೆ ಐದು ದಿನದ ಹಿಂದೆ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು. ಹುಟ್ಟುವಾಗಲೇ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಶಿಶುವನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಐದು ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ. ಹಾಗಾಗಿ ವೈದ್ಯರ ಸೂಚನೆಯಂತೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದು ಪಾಲಕರ ಮನವಿ ಮೇರೆಗೆ ಪೊಲೀಸ್ ಇಲಾಖೆಯು ಜೀರೋ ಟ್ರಾಫಿಕ್ನಲ್ಲಿ ಶಿಶುವನ್ನು ಸ್ಥಳಾಂತರಿಸಲು ಅನುವು ಮಾಡಿಕೊಟ್ಟಿತ್ತು.
ಇದನ್ನೂ ಓದಿ » ಶಿವಮೊಗ್ಗದ ಜನರೆ ಹುಷಾರ್, ಇಲ್ಲಿದೆ ಟಾಪ್ 5 ವಂಚನೆ ಲಿಸ್ಟ್, ಇವರ ಬಲೆಗೆ ಬಿದ್ದರೆ ಸಂಕಷ್ಟ ಫಿಕ್ಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200