
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೋರಂ ಕೊರತೆಯಿಂದಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಮುಂದಕ್ಕೆ ಹೋಗಿದೆ. ಅಕ್ಟೋಬರ್ 16ಕ್ಕೆ ಸಾಮಾನ್ಯ ಸಭೆ ನಿಗದಿಗೊಳಿಸಲಾಗಿದೆ.
ಒಂದು ಗಂಟೆ ಕಾದರೂ ಕೋರಂ ಇಲ್ಲ
ಬೆಳಗ್ಗೆ 11 ಗಂಟೆಗೆ ಸಾಮಾನ್ಯ ಸಭೆ ನಿಗದಿಯಾಗಿತ್ತು. ಆದರೆ ಕೋರಂ ಕೊರತೆ ಹಿನ್ನೆಲೆ ಸದಸ್ಯರು ಬರಲಿ ಎಂದು ಒಂದು ಗಂಟೆ ಎಲ್ಲರು ಕಾದರು. ಆದರೆ ನಿಗದಿತ ಸಂಖ್ಯೆಯ ಸದಸ್ಯರು ಬಾರದ ಹಿನ್ನೆಲೆ, ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅವರು ಸಭೆಯನ್ನು ಅರ್ಧ ಗಂಟೆ ಮುಂದೂಡಿದರು. ಎರಡನೇ ಬಾರಿ ಸಭೆ ಸೇರಿದಾಗಲೂ ಕೋರಂ ಕೊರತೆ ಉಂಟಾಯಿತು. ಹಾಗಾಗಿ ಸಭೆಯನ್ನು ಅಕ್ಟೋಬರ್ 16ಕ್ಕೆ ಮುಂದೂಡಲಾಯಿತು.

ಕರೋಂ ಎಷ್ಟು? ಸಭೆಯಲ್ಲಿದ್ದವರೆಷ್ಟು?
ಸಂಸದರು, ಶಾಸಕರು, ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲೂಕು ಪಂಚಾಯಿತಿ ಅಧ್ಯಕ್ಷರು ಸೇರಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ 51 ಮಂದಿ ಭಾಗವಹಿಸಬೇಕು. 26 ಮಂದಿ ಭಾಗವಹಿಸಿದರೆ ಕೋರಂ ರಚನೆ ಆಗುತ್ತಿತ್ತು. ಆದರೆ ಇವತ್ತು ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಅವರು ಸೇರಿ 15 ಸದಸ್ಯರಷ್ಟೆ ಭಾಗವಹಿಸಿದ್ದರು. ಹಾಗಾಗಿ ಇವತ್ತಿನ ಸಭೆ ಟೀ, ಕಾಫಿಗಷ್ಟೇ ಸೀಮಿತವಾಯಿತು.
ಜೆಡಿಎಸ್, ಕಾಂಗ್ರೆಸ್ ಸದಸ್ಯರು ಗೈರು
ಭೀಮನೇರಿ ಶಿವಪ್ಪ ಅವರ ಹೊರತು ಜಿಲ್ಲಾ ಪಂಚಾಯಿತಿಯ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರೆಲ್ಲ ಗೈರಾಗಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮತ್ತು ಮೈತ್ರಿ ಪಕ್ಷಗಳ ನಡುವೆ ವೈಮನಸು ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮೈತ್ರಿ ಧರ್ಮ ಮರೆತು, ಬಿಜೆಪಿಯ ಸದಸ್ಯರನಷ್ಟೆ ನೇಮಕ ಮಾಡಿದ್ದರು. ಜೆಡಿಎಸ್, ಕಾಂಗ್ರೆಸ್ ಮೈತ್ರಿಯಿಂದ ಅಧ್ಯಕ್ಷರಾಗಿ ಬಿಜೆಪಿ ಪರವಾದ ನಿಲುವು, ನಿರ್ಧಾರ ಕೈಗೊಂಡಿದ್ದಾರೆ ಎಂಬ ಕಾರಣಕ್ಕೆ ಜೆಡಿಎಸ್, ಕಾಂಗ್ರೆಸ್ ಸದಸ್ಯರು ಮುನಿಸಿಕೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






