Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮಾಲೀಕಳಿಗಾಗಿ ಆಸ್ಪತ್ರೆ ಬಾಗಿಲಲ್ಲೇ ಕಾದು ಕುಳಿತ ನಾಯಿ, ಇದು ರಿಯಲ್ ಚಾರ್ಲಿ ಕಥೆ

ಮಾಲೀಕಳಿಗಾಗಿ ಆಸ್ಪತ್ರೆ ಬಾಗಿಲಲ್ಲೇ ಕಾದು ಕುಳಿತ ನಾಯಿ, ಇದು ರಿಯಲ್ ಚಾರ್ಲಿ ಕಥೆ

07/01/2023 7:11 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS |7 JANUARY 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

THIRTHAHALLI : ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಲೀಕರಿಗಾಗಿ ನಾಯಿಯೊಂದು (dog) ಅದೆ ಆಸ್ಪತ್ರೆಯ ಬಾಗಿಲಲ್ಲಿ ಕಾದು ಕುಳಿತ ಫೋಟೊ ವೈರಲ್ ಆಗಿದೆ. ಇದು ಇತ್ತೀಚೆಗೆ ಬಿಡುಗಡೆಯಾದ ‘ಚಾರ್ಲಿ 777’ ಸಿನಿಮಾದ ದೃಶ್ಯವನ್ನು ನನೆಪಿಸುತ್ತಿದೆ. ಅಷ್ಟೆ ಅಲ್ಲ, ಈಗ ಇಡೀ ಪಟ್ಟಣದ ಜನ ಈ ಶ್ವಾನಕ್ಕೆ (dog) ಚಾರ್ಲಿ ಎಂದು ಕರೆಯುತ್ತಿದ್ದಾರೆ.

ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿ ನಾಗರತ್ನ ಶಾಸ್ತ್ರಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪಟ್ಟಣದ ಕಿರಣ್ ಆಸ್ಪತ್ರೆಯಲ್ಲಿ ನಾಗರತ್ನ ಶಾಸ್ತ್ರಿಯವರಿಗೆ ಚಿಕಿತ್ಸೆ ನಡೆಯುತ್ತಿತ್ತು.

ಬಾಗಿಲಲ್ಲಿ ಕಾದು ಕುಳಿತ ಶ್ವಾನ

ನಾಗರತ್ನ ಶಾಸ್ತ್ರಿ ಅವರ ಮಗಳು ಸುಧಾ ಜೋಯಿಸ್ ಅವರು ಮನೆಯಲ್ಲಿ ನಾಯಿ (dog) ಸಾಕಿದ್ದಾರೆ. 8 ತಿಂಗಳ ನಾಯಿಗೆ ಪುಪ್ಪಿ ಎಂದು ಕರಿಯುತ್ತಿದ್ದಾರೆ. ನಾಗರತ್ನ ಶಾಸ್ತ್ರಿಯವರು ಆಸ್ಪತ್ರೆಗೆ ದಾಖಲಾದಾಗಿನಿಂದ ಪುಪ್ಪಿ, ಕಿರಣ್ ಆಸ್ಪತ್ರೆ ಬಾಗಿಲಲ್ಲಿ ಮೊಕ್ಕಾಂ ಹೂಡಿತ್ತು. ಆಸ್ಪತ್ರೆ ಸಿಬ್ಬಂದಿ ಮತ್ತು ಬಂದು ಹೋಗುವ ಸಾರ್ವಜನಿಕರಿಗೆ ಪುಪ್ಪಿ ತೊಂದರೆ ಕೊಟ್ಟಿಲ್ಲ. ಆದರೆ ಹೆಚ್ಚು ಹೊತ್ತು ಆಸ್ಪತ್ರೆ ಬಾಗಿಲಲ್ಲೆ ಕಾದು ಕುಳಿತಿರುತ್ತಿತ್ತು.

Dog Waits for his care taker to discharge from hospital at Thirthahalli in Shimoga

Photo | Sukesh Kumar H.R, Thirthahalli

ವಾರ್ಡ್ ಕಡೆಗೆ ಕಣ್ಣು ನೆಟ್ಟಿರುತ್ತಿತ್ತು

ಇನ್ನು, ಆಸ್ಪತ್ರೆ ಬಾಗಿಲಲ್ಲಿ ನಿಲ್ಲುತ್ತಿದ್ದ ಪುಪ್ಪಿ, ನಾಗರತ್ನ ಶಾಸ್ತ್ರಿಯವರನ್ನು ಕರೆದೊಯ್ದು ದಾಖಲು ಮಾಡಿದ್ದ ವಾರ್ಡ್ ಕಡೆಗೆ ದೃಷ್ಟಿ ನೆಟ್ಟಿರುತ್ತಿತ್ತು. ಬೇರೆ ಯಾರೆ ಬಂದು ಮಾತನಾಡಿಸಿದರು, ಸೌಮ್ಯವಾಗಿಯೇ ಪ್ರತಿಕ್ರಿಯಿಸಿತ್ತಿತ್ತು. ಆ ಬಳಿಕ ಪುನಃ ವಾರ್ಡ್ ಕಡೆಗೆ ಕಣ್ಣು ನೆಟ್ಟು ಕಾದು ನಿಲ್ಲುತ್ತಿತ್ತು. ನಾಗರತ್ನ ಶಾಸ್ತ್ರಿಯವರು ಆಸ್ಪ್ರೆಯಿಂದ ಡಿಸ್ಚಾರ್ಜ್ ಆದಾಗ, ಆಂಬುಲೆನ್ಸ್ ಬಳಿ ಕುಣಿದಾಡಿತ್ತು ಅನ್ನುತ್ತಾರೆ ಸಿಬ್ಬಂದಿ.

‘ಒಂದೂವರೆ ತಿಂಗಳಿದ್ದಾಗ ಅದನ್ನು ಮನೆಗೆ ತಂದಿದ್ದು. ಪುಪ್ಪಿ ಎಂದು ಕರೆಯುತ್ತೇವೆ. ಈಗ ಅದಕ್ಕೆ 8 ತಿಂಗಳು. ನಮ್ಮ ತಾಯಿಗೆ ವಯಸ್ಸಾಗಿದೆ. ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಕಿರಣ್ ಆಸ್ಪತ್ರೆಗೆ ದಾಖಲು ಮಾಡಿದ್ದೆವು. ನಮ್ಮ ಜೊತೆಗೆ ಬಂದು ಆಸ್ಪತ್ರೆ ಮುಂದೆ ನಿಲ್ಲುತ್ತಿತ್ತು. ಅಲ್ಲಿಗೆ ಬರುವ ಎಲ್ಲರಿಗು ಅದು ನಮ್ಮ ಮನೆ ನಾಯಿ ಅನ್ನುವುದು ಗೊತ್ತಾಗಿ ಹೋಗಿದೆ’ ಅನ್ನುತ್ತಾರೆ ನಾಗರತ್ನ ಶಾಸ್ತ್ರಿ ಅವರ ಮಗಳು ಸುಧಾ ಜೋಯಿಸ್.

Shimoga Live News Website Reach

ಏನೇನೂ ತಿನ್ನದೆ ಹಾಗೆ ಕುಳಿತಿದೆ

ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗರತ್ನ ಶಾಸ್ತ್ರಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೇಲೆ ಕೊನೆಯುಸಿರೆಳೆದಿದ್ದಾರೆ. ಆಗಿನಿಂದಲು ಪುಪ್ಪಿ ಆಹಾರ ಸೇವಿಸದೆ ಸುಮ್ಮನೆ ಕುಳಿತಿದೆಯಂತೆ. ‘ಅಮ್ಮ ತೀರಿಕೊಂಡರು. ಪುಪ್ಪಿ ಆಗಿನಿಂದ ಏನೇನೂ ತಿಂದಿಲ್ಲ. ನಮ್ಮ ಮನೆಯಲ್ಲಿ ಯಾರಿಗಾದರು ಆರೋಗ್ಯ ಸಮಸ್ಯೆಯಾದರು ಅದಕ್ಕೆ ಗೊತ್ತಾಗುತ್ತದೆ. ಆಗ ಅದು ಕೂಡ ಡಲ್ ಆಗಿ ಕೂರುತ್ತದೆ’ ಅನ್ನುತ್ತಾರೆ ಸುಧಾ ಜೋಯಿಸ್.

ಎಲ್ಲರು ಈಗ ಚಾರ್ಲಿ ಅನ್ನುತ್ತಿದ್ದಾರೆ

ಸುಧಾ ಜೋಯಿಸ್ ಅವರ ಮನೆಯ ಪುಪ್ಪಿಗೆ ಈಗ ತೀರ್ಥಹಳ್ಳಿ ಪಟ್ಟಣದ ಜನರು ಚಾರ್ಲಿ ಅಂತಾ ಕರೆಯಲು ಆರಂಭಿಸಿದ್ದಾರೆ. ಚಾರ್ಲಿ ಸಿನಿಮಾದ ನಾಯಿಯಂತೆಯೆ ಬಣ್ಣ, ಅದರಂತೆಯೇ ಹೊಂದಾಣಿಕೆ, ಹೇಳಿದ್ದು ಕೇಳುವ ಸ್ವಭಾವ ಕಂಡು ಜನರು ಚಾರ್ಲಿ ಎಂದು ಕರೆಯುತ್ತಿದ್ದಾರಂತೆ.

ಇದನ್ನೂ ಓದಿ – ಶಿವಮೊಗ್ಗದ ಈ ಆಟೋ ಈಗ ‘ಪುನೀತ ರಥ’, ಚಾಲಕನ ಮನೆ, ಮನ, ಮೊಬೈಲ್ ತುಂಬಾ ಅಪ್ಪು ಅಮರ

ಆರೋಗ್ಯ ಕೈಕೊಟ್ಟಾಗ ನಂಟರು, ಇಷ್ಟರು ಬರುವುದೆ ಕಷ್ಟದ ಕಾಲ. ಇಂತಹ ಸಂದರ್ಭ ತನ್ನನ್ನು ಸಾಕಿದವರು ಹಾಸಿಗೆ ಹಿಡಿದಾಗ ಆಸ್ಪತ್ರೆಗೆಯ ಬಾಗಿಲಲ್ಲಿ ನಿಂತು ಅವರಿಗಾಗಿ ಕಾದ ಕುಳಿತ ಪುಪ್ಪಿ ಮಾದರಿ ಅನಿಸುತ್ತದೆ. ನಾಯಿಯ ನಿಷ್ಠೆಯನ್ನು ಪುನಃ ಸಾಬೀತುಪಡಿಸಿದೆ.

Shivamogga Live | Whatsapp7411700200
CLICK & JOIN – OUR WHATSAPP GROUP CLICK & JOIN – OUR WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Areca Price in Shimoga APMC ಅಡಕೆ ಧಾರಣೆ | 7 ಜನವರಿ 2023 | ಇವತ್ತು ಯಾವ್ಯಾವ ಅಡಕೆ ರೇಟ್ ಎಲ್ಲೆಲ್ಲಿ ಎಷ್ಟಿದೆ?
Next Article fire-at-Bhoopalm-House-Businessman-Sharat-dies BREAKING NEWS | ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಎದುರಿನ ಭೂಪಾಳಂ ಮನೆಯಲ್ಲಿ ಅಗ್ನಿ ಅವಘಡ, ಖ್ಯಾತ ಉದ್ಯಮಿ ನಿಧನ

ಇದನ್ನೂ ಓದಿ

Thirthahalli-News-Update
THIRTHAHALLI

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
ACCIDENT-NEWS-GENERAL-IMAGE.
THIRTHAHALLI

ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
power cut mescom ELECTRICITY
THIRTHAHALLI

ಕೋಣಂದೂರಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Thirthahalli-News-Update
THIRTHAHALLI

ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
Thirthahalli-News-Update
THIRTHAHALLI

ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
THIRTHAHALLI

ತೀರ್ಥಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಆಸ್ಪತ್ರೆಗೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?