ಶಿವಮೊಗ್ಗದಲ್ಲಿ ಒಂದೇ ತಿಂಗಳಲ್ಲಿ 1500 ಕರೋನ ಪಾಸಿಟಿವ್ ಕೇಸ್, ವ್ಯಾಪಕವಾಗ್ತಿದೆ ಸೋಂಕು, ಗುಣ ಆದವರೆಷ್ಟು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2020

ಶಿವಮೊಗ್ಗದಲ್ಲೂ ಬೆಂಗಳೂರು ಮಾದರಿಯಲ್ಲೇ ಕರೋನ ಸೋಂಕು ಹರಡುತ್ತಿದೆ. ಪಟ್ಟಣ, ಹಳ್ಳಿ ಎಂಬ ಭೇದವಿಲ್ಲದೆ ವ್ಯಾಪಕವಾಗಿದೆ. ಪ್ರತಿ ಬೀದಿಯಲ್ಲೂ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಜುಲೈ ತಿಂಗಳಲ್ಲಿ ಕರೋನ ಹರಡಿದ ವೇಗ ಗಮನಿಸಿದರೆ, ಈ ತಿಂಗಳು ಮತ್ತಷ್ಟು ಗಂಭೀರ ಸ್ವರೂಪ ಪಡೆಯುವ ಲಕ್ಷಣ ಗೋಚರಿಸುತ್ತಿದೆ.

ಜುಲೈ ತಿಂಗಳಲ್ಲಿ ಎಷ್ಟಾಯ್ತು ಸೋಂಕು?

ಜುಲೈ ತಿಂಗಳ ಆರಂಭದಲ್ಲಿ ಕರೋನ ಸೋಂಕಿತರ ಸಂಖ್ಯೆ 176 ಇತ್ತು. ಹದಿನೈದು ದಿನದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 644ಕ್ಕೆ ಏರಿಕೆಯಾಗಿತ್ತು. ಜುಲೈ ತಿಂಗಳ ಕೊನೆಯಲ್ಲಿ 1727ಗೆ ಹೆಚ್ಚಳವಾಗಿದೆ. ಇದೊಂದೇ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 1551 ಕೇಸ್ ಪತ್ತೆಯಾಗಿವೆ. ಶಿವಮೊಗ್ಗ, ಭದ್ರಾವತಿ ಮತ್ತು ಶಿಕಾರಿಪುರ ತಾಲೂಕಿನಲ್ಲೆ ಹೆಚ್ಚು ಪ್ರಕರಣಗಳಿವೆ.

116428542 1182171282144290 8111081096434639671 n.jpg? nc cat=109& nc sid=8024bb& nc ohc=jbsBv3xd2dwAX dPHoH& nc ht=scontent.fblr11 1

ಗುಣವಾಗುವವರ ಸಂಖ್ಯೆಯು ಹೆಚ್ಚಳ

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಂತೆಯೇ ಗುಣವಾಗುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿ ಶೇ.50ಕ್ಕಿಂತಲೂ ಹೆಚ್ಚು ಸೋಂಕಿತರು ಗುಣವಾಗಿ, ಮನೆಗೆ ಮರಳುತ್ತಿದ್ದಾರೆ. ಇದು ಸಮಾಧಾನಕರ ಸಂಗತಿಯಾಗಿದೆ. ಆಗಸ್ಟ್ 3ರ ಜಿಲ್ಲಾಡಳಿತದ ವರದಿ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 2094, ಗುಣವಾದವರ ಸಂಖ್ಯೆ 1095 ಇದೆ.

ಸೋಂಕಿತರ ಸಂಖ್ಯೆ ಹೆಚ್ಚಳಕ್ಕೇನು ಕಾರಣ?

ಶಿವಮೊಗ್ಗದಲ್ಲಿ ಮೊದಲ ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಮೇ 10ರಂದು. ಗುಜರಾತ್ ರಾಜ್ಯದ ಅಹಮದಾಬಾದ್‍ನಿಂದ ಹಿಂತಿರುಗಿದ್ದ ಎಂಟು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆರಂಭದಲ್ಲಿ ವಿರಳವಾಗಿದ್ದ ಪ್ರಕರಣಗಳು ಕೊನೆಗೆ ಪ್ರತಿದಿನ ಸೋಂಕಿತರು ಪತ್ತೆಯಾಗುವಂತಾಯಿತು. ಈಗಂತೂ ಪ್ರತಿದಿನ ಸರಾಸರಿ ನೂರು ಕೇಸ್‍ ಪತ್ತೆಯಾಗುತ್ತಿದೆ. ‘ಜಿಲ್ಲೆಯಲ್ಲಿ ಕರೋನ ತಪಾಸಣೆ ಪ್ರಮಾಣ ಹೆಚ್ಚಳ ಮಾಡಲಾಗಿದೆ. ಇದೇ ಕಾರಣಕ್ಕೆ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ’ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಜಿಲ್ಲೆಯಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮುಂಜಾಗ್ರತಾ ಕ್ರಮ ವಹಿಸಿದರೆ ಸೋಂಕು ತಡೆಯಬಹುದಾಗಿದೆ. ಇಲ್ಲವಾದರೆ ಆಗಸ್ಟ್ ತಿಂಗಳಲ್ಲಿ ಸೋಂಕು ಮತ್ತಷ್ಟು ವೇಗವಾಗಿ ಹರಡುವ ಸಾದ್ಯತೆ ಇದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 4, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment