ಇನ್ಮುಂದೆ ಶಿವಮೊಗ್ಗದ ಹಳ್ಳಿಗಳನ್ನು ಸ್ವಚ್ಚವಾಗಿಡಲು ಬರುತ್ತೆ ಮಹಿಳೆಯರ ಟೀಮ್, ಕೆಲಸ ಆರಂಭಕ್ಕೆ ದಿನಾಂಕ ಫಿಕ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2021

ಇನ್ಮುಂದೆ ಹಳ್ಳಿಗಳಲ್ಲಿ ಮಹಿಳೆಯರು ವಾಹನ ಚಲಾಯಿಸಿಕೊಂಡು ಬಂದು ಮನೆ ಮನೆಯಿಂದ ಕಸ ಪಡೆಯುತ್ತಾರೆ. ವಾಹನ ಚಾಲನೆ ಅಷ್ಟೇ ಅಲ್ಲ. ಕಸ ಸಂಗ್ರಹಣೆ, ವಿಂಗಡಣೆಯ ಜವಾಬ್ದಾರಿ ಕೂಡ ಮಹಿಳೆಯರದ್ದೇ. ಮಹಿಳಾ ಸಬಲೀಕರಣ ಆಶಯವನ್ನು ಜಾರಿಗೆ ತರುವಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಬೃಹತ್ ಹೆಜ್ಜೆ ಇಟ್ಟಿದೆ.

ರಾಜ್ಯದ ಪ್ರತಿಯೊಂದು ಗ್ರಾಪಂ ಮಟ್ಟದಲ್ಲಿ ಕಸ ಸಂಗ್ರಹಣೆ, ವಿಂಗಡಣೆಗೆ ವ್ಯವಸ್ಥೆ ಮಾಡಲಾಗಿದ್ದು ಮೊದಲ ಹಂತದಲ್ಲಿ ಆಯ್ದ ಗ್ರಾಪಂಗಳಲ್ಲಿ ಕಸ ಸಂಗ್ರಹಣೆಗೆ ಚಾಲನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಭಾಗದ ಕೆಲ ಗ್ರಾಪಂಗಳು ಈಗಾಗಲೇ ಕಸ ಸಂಗ್ರಹಣೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದು ಅದನ್ನೇ ಮಾದರಿಯಾಗಿಟ್ಟುಕೊಂಡು ಯೋಜನೆ ರೂಪಿಸಲಾಗಿದೆ.

ನೇಮಕ, ತರಬೇತಿ, ವೇತನ

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ವತಿಯಿಂದ ಗ್ರಾಪಂ ಮಟ್ಟದಲ್ಲಿ ಸ್ವಚ್ಛ ಸಂಕೀರ್ಣ ಘಟಕದ ನಿರ್ವಹಣೆ ವಹಿಸಿಕೊಂಡಿದ್ದು ಹೊರಗುತ್ತಿಗೆ ಆಧಾರದ ಮೇಲೆ ಅದಕ್ಕೆ ಸಿಬ್ಬಂದಿ ನೇಮಕ, ತರಬೇತಿ, ವೇತನ ನೀಡುತ್ತದೆ. ಆಯಾ ಗ್ರಾಪಂಗಳ ಆರ್ಥಿಕ ಶಕ್ತಿ ಆಧಾರದ ಮೇಲೆ ಆಕರ್ಷಕ ವೇತನ ಕೂಡ ನಿಗದಿಯಾಗಿದೆ.

AVvXsEhhQ8ihGMYWPolkbiFbiGb5pMxtSkrj0ypTbRetNV6jiVLBQt 5IEo86wWoCgzD8mV1FNvamNYRb1fqYjlgLKPQqbFj65mmLX KBG041hIG2XS8lw F9aCg Kaqn2wYsbDbeoA6cuCRSvAe8CtBw Re2j6qDkOMiwrYsmoS

ಕೌಶಲ್ಯ ಕರ್ನಾಟಕದ ವತಿಯಿಂದ ಆಯಾ ಗ್ರಾಪಂ ವ್ಯಾಪ್ತಿಯ ಮಹಿಳೆಯರನ್ನು ಆಯ್ಕೆ ಮಾಡಿ ಅವರಿಗೆ ಮಾನ್ಯತೆ ಪಡೆದ ಚಾಲನಾ ತರಬೇತಿ ಸಂಸ್ಥೆ ವತಿಯಿಂದ ತರಬೇತಿ, ಡಿಎಲ್ ಸಹ ಕೊಡಿಸಲಾಗಿದೆ. ಸ್ವಚ್ಛ ಭಾರತ, 15ನೇ ಹಣಕಾಸು ನಿಧಿ, ಜಿಪಂ ಅನುದಾನ ಬಳಸಿಕೊಂಡು ವಾಹನ ವ್ಯವಸ್ಥೆ, ಡಂಪಿಂಗ್ ಯಾರ್ಡ್ ಆಯ್ಕೆ, ಮನೆ ಮನೆಗೆ ಕಿಟ್ ವ್ಯವಸ್ಥೆ ಮಾಡಲಾಗಿದೆ. ತರಬೇತಿ ಪಡೆದ ಮಹಿಳೆಯರು ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಿಂದಲೂ ಕಸ ಸಂಗ್ರಹಿಸಿ ವಿಲೇವಾರಿ ಮಾಡಬೇಕು. ಕಸದಿಂದ ಬಂದ ಆದಾಯವನ್ನು ಸಿಬ್ಬಂದಿ, ವಾಹನ ವೆಚ್ಚಕ್ಕೆ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.

ADVT JULY NANJAPPA HOSPITAL HOME LAB TESTING

ಕಸ ವಿಲೇವಾರಿಗೆ ಪ್ಲಾನ್

ಸ್ಥಳಾವಕಾಶ ಇರುವ ಕಡೆ ಆಯಾ ಗ್ರಾಪಂಗಳಲ್ಲೇ ಕಸ ವಿಲೇವಾರಿ ತಾಣಗಳನ್ನು ಗುರುತಿಸಲಾಗಿದೆ. ಇಲ್ಲದ ಕಡೆ ಎರಡ್ಮೂರು ಗ್ರಾಪಂ ಸೇರಿ ಕ್ಲಸ್ಟರ್ ಮಾಡಲಾಗಿದೆ. ಸೇಲ್ ಆಗದ ಕೆಲವು ಗುಜರಿ ಸಾಮಾನುಗಳನ್ನು  ಎಂಆರ್‌ಎಫ್ (ಮೆಟಿರೀಯಲ್ ರಿಕವರಿ ಫೆಸಿಲಿಟಿ) ಯಲ್ಲಿ ಸಂಗ್ರಹಿಸಿ ಬೇಡಿಕೆ ಬಂದಾಗ ಮಾರುವ ಬಗ್ಗೆಯೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಹಿಳೆಯರಿಗೆ ಉತ್ತಮ ವೇತನ

ವಾರದಲ್ಲಿ ಎರಡು ದಿನ ಒಂದು ಗ್ರಾಮದಲ್ಲಿ ಕಸ ಸಂಗ್ರಹಣೆ ಮಾಡಬೇಕು. ದೊಡ್ಡ ಗ್ರಾಮಗಳಾಗಿದ್ದರೆ ದಿನಕ್ಕೊಮ್ಮೆ ಮಾಡಲಾಗುವುದು. ಕಸ ಸಂಗ್ರಹಣೆ ಹಾಗೂ ವಿಂಗಡಣೆ, ಚಾಲಕರಿಗೆ ಆಯಾ ಗ್ರಾಪಂಗಳೇ ವೇತನ ನಿಗದಿ ಮಾಡಬಹುದು. ಖರ್ಚು ವೆಚ್ಚ, ಆದಾಯದ ಆಧಾರದ ಮೇಲೆ ವೇತನ ನಿಗದಿಗೆ ಅವಕಾಶ ನೀಡಲಾಗಿದೆ. ಚಾಲಕರಿಗೆ ಕನಿಷ್ಠ 15 ಸಾವಿರ ರೂ. ಸಂಬಳ ಇದೆ.

LifeSpring%2BKan%2B02

ಮನೆಗಳಿಂದ ಹಣ ಸಂಗ್ರಹ

ಖರ್ಚು ವೆಚ್ಚ ನಿರ್ವಹಣೆಗೆ ಆಯಾ ಗ್ರಾಮಗಳಿಂದಲೇ ಆದಾಯ ಸಂಗ್ರಹಕ್ಕೆ ಯೋಜನೆ ರೂಪಿಸಲಾಗಿದೆ. ತಿಂಗಳಿಗೆ ಪ್ರತಿ ಮನೆಯಿಂದ 20ರಿಂದ 30 ರೂ. ಅಂಗಡಿಗಳಾದರೆ 100 ರೂ., ಬಾರ್, ಹೋಟೆಲ್‌ಗಳಾದರೆ 500 ರೂ.ವರೆಗೂ ವೆಚ್ಚ ಸಂಗ್ರಹ ಮಾಡಬಹುದು. ಗ್ರಾಮಗಳ ಸ್ಥಿತಿಗತಿಗೆ ತಕ್ಕಂತೆ ಕೂಡ ಶುಲ್ಕ ಸಂಗ್ರಹಕ್ಕೆ ಅವಕಾಶ ನೀಡಲಾಗಿದೆ.

AVvXsEgJMmryUgsZNDx8MEpNDgahseyBho77Sx1OlJmjkWIB5oIPH32d0hCUMV9UmDLR0U3TQQR1Du6LrW7thHSkOi0Ki2fxrtUrN4 ompT5fAJBhHZhQXMYwjGtutf322BRjK4XGmazF3 42gvaIkOPX670Tc8ppiAKThCynMyjObzgrRbWFLLshKGitHSeHQ=s926

‘ಮನೆ ಅಷ್ಟೆ ಅಲ್ಲ, ಗ್ರಾಮವನ್ನೂ ಸ್ವಚ್ಛವಾಗಿಡ್ತಾರೆ’

ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ ದೃಷ್ಟಿಯಿಂದ ರಾಜ್ಯದಲ್ಲಿ ಕಸ ಸಂಗ್ರಹಣೆಗೆ ವಾಹನ ಖರೀದಿಸಲಾಗಿದೆ. ಅದಕ್ಕೆ ಮಹಿಳಾ ಡ್ರೈವರ್’ಗಳೇ ಬೇಕೆಂದು ಅಪೇಕ್ಷೆ ವ್ಯಕ್ತಪಡಿಸುತ್ತಿದ್ದೆವು. ಅದರಂತೆ ಅವಕಾಶ ಮಾಡಿಕೊಡಲಾಗಿದೆ. ಮನೆ ಸ್ವಚ್ಛವಾಗಿ ಇಟ್ಟುಕೊಳ್ಳುವ ಕೆಲಸ ಮಹಿಳೆಯರಿಗೆ ಗೊತ್ತು. ಅದೇ ರೀತಿ ಗ್ರಾಮವನ್ನೂ ಸ್ವಚ್ಛವಾಗಿಟ್ಟುಕೊಳ್ಳುವ ನಿಟ್ಟಿನಲ್ಲಿ ಅವರಿಗೆ ತರಬೇತಿ ನೀಡಿ ಅವರಿಗೆ ಮೊದಲ ಆದ್ಯತೆ ನೀಡಿದ್ದೇವೆ ಅನ್ನುತ್ತಾರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ.

KS Eshwarappa DC Office Meeting 1

ನವೆಂಬರ್ 1ರಿಂದ ಕಾರ್ಯಾರಂಭ

ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಗ್ರಾಪಂಗಳಿದ್ದು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಮೊದಲ ಹಂತದಲ್ಲಿ ಶಿವಮೊಗ್ಗದ 30, ಹಾವೇರಿ, ಚಿತ್ರದುರ್ಗದ 30, ರಾಯಚೂರಿನ 31 ಮಂದಿಗೆ ಚಾಲನಾ ತರಬೇತಿ ನೀಡಲಾಗಿದೆ. ಇವರು ನವೆಂಬರ್ 1ರಿಂದ ಅಧಿಕೃತವಾಗಿ ಕಾರ್ಯಾರಂಭ ಮಾಡಲಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 26, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment