SHIVAMOGGA LIVE NEWS | 1 NOVEMBER 2023
SHIMOGA : ತುಮಕೂರಿನಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ (Sports) ಸಮಗ್ರ ಪ್ರಶಸ್ತಿಯಲ್ಲಿ ಶಿವಮೊಗ್ಗ ತಂಡ ದ್ವಿತೀಯ ಸ್ಥಾನ ಪಡೆದಿದೆ.
![]() |
ಸಮಗ್ರ ಪ್ರಶಸ್ತಿಯಲ್ಲಿ ಬೆಂಗಳೂರು ಪ್ರಥಮ, ಶಿವಮೊಗ್ಗ ದ್ವಿತೀಯ, ಹಾಸನ ತಂಡ ತೃತೀಯ ಸ್ಥಾನ ಪಡೆದಿದೆ.
ಅರಣ್ಯ ರಕ್ಷಕನಿಗೆ ಅಭಿನಂದನೆ
ಪವರ್ ಲಿಫ್ಟಿಂಗ್ನಲ್ಲಿ ಮೂರನೇ ಸ್ಥಾನ ಪಡೆದ ಉಂಬ್ಳೆಬೈಲು ಅರಣ್ಯ ವಲಯದ ಅರಣ್ಯ ರಕ್ಷಕ ಮಾಲತೇಶ್ ಸೂರ್ಯವಂಶಿ ಅವರಿಗೆ ಜಯ ಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅನಿಲ್ ಸಿ , ವಿಶ್ವನಾಥ್ ಗೌಡ, ನಾರಾಯಣ ಗೌಡ, ಪದ್ಮನಾಭ, ರಾಘವೇಂದ್ರ, ವಿಶ್ವನಾಥ್, ಪ್ರದೀಪ್, ಹೇಮಂತ್, ಕಿರಣ್, ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ- ಚಕ್ರಕ್ಕೆ ಸೀರೆ ಸಿಲುಕಿದೆ ಅಂದರು, ಬೈಕ್ ಸ್ಲೋ ಮಾಡ್ತಿದ್ದಂತೆ ಮಹಿಳೆಯರಿಗೆ ಶಾಕ್, 2 ತಿಂಗಳ ಬಳಿಕ ಕೇಸ್
ಕಂಸಿ ವಿಶ್ವನಾಥ್ಗೆ ಕುಸ್ತಿಯಲ್ಲಿ ಪ್ರಥಮ
ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೌಕರ ಎನ್.ಮಾಲತೇಶ್ ಅವರು 78 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಾಲತೇಶ್ ಅವರು ಶಿವಮೊಗ್ಗ ತಾಲೂಕಿನ ಕುಂಸಿಯವರು. ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200