ಶಿವಮೊಗ್ಗ ತಂಡಕ್ಕೆ ಎರಡನೇ ಸ್ಥಾನ, ಅರಣ್ಯ ರಕ್ಷಕನಿಗೆ ಸನ್ಮಾನ, ಕುಂಸಿ ಮಲಾತೇಶ್‌ಗೆ ಪ್ರಥಮ ಸ್ಥಾನ

SHIVAMOGGA LIVE NEWS | 1 NOVEMBER 2023➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ತುಮಕೂರಿನಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ (Sports) ಸಮಗ್ರ ಪ್ರಶಸ್ತಿಯಲ್ಲಿ ಶಿವಮೊಗ್ಗ ತಂಡ ದ್ವಿತೀಯ ಸ್ಥಾನ ಪಡೆದಿದೆ.

011123-shimoga-wins-second-place-in-government-employees-association-sports.webp

ಸಮಗ್ರ ಪ್ರಶಸ್ತಿಯಲ್ಲಿ ಬೆಂಗಳೂರು ಪ್ರಥಮ, ಶಿವಮೊಗ್ಗ ದ್ವಿತೀಯ, ಹಾಸನ ತಂಡ ತೃತೀಯ ಸ್ಥಾನ ಪಡೆದಿದೆ.

 ಕ್ರೀಡಾಕೂಟವನ್ನು ಯಶಸ್ಸಿಗೆ ಸಹಕರಿಸಿದ ಜಿಲ್ಲಾಡಳಿತ, ತುಮಕೂರು ಜಿಲ್ಲಾ ಸರ್ಕಾರಿ ನೌಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಜಿಲ್ಲಾಧ್ಯಕ್ಷರಿಗೆ, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳಿಗೆ ಧನ್ಯವಾದಗಳು. ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷ, ಸರ್ಕಾರಿ ನೌಕರರ ಸಂಘ

ಅರಣ್ಯ ರಕ್ಷಕನಿಗೆ ಅಭಿನಂದನೆ

ಪವರ್‌ ಲಿಫ್ಟಿಂಗ್‌ನಲ್ಲಿ ಮೂರನೇ ಸ್ಥಾನ ಪಡೆದ ಉಂಬ್ಳೆಬೈಲು ಅರಣ್ಯ ವಲಯದ ಅರಣ್ಯ ರಕ್ಷಕ ಮಾಲತೇಶ್‌ ಸೂರ್ಯವಂಶಿ ಅವರಿಗೆ ಜಯ ಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅನಿಲ್‌ ಸಿ , ವಿಶ್ವನಾಥ್‌ ಗೌಡ, ನಾರಾಯಣ ಗೌಡ, ಪದ್ಮನಾಭ, ರಾಘವೇಂದ್ರ, ವಿಶ್ವನಾಥ್‌, ಪ್ರದೀಪ್‌, ಹೇಮಂತ್‌, ಕಿರಣ್‌, ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ- ಚಕ್ರಕ್ಕೆ ಸೀರೆ ಸಿಲುಕಿದೆ ಅಂದರು, ಬೈಕ್ ಸ್ಲೋ ಮಾಡ್ತಿದ್ದಂತೆ ಮಹಿಳೆಯರಿಗೆ ಶಾಕ್‌, 2 ತಿಂಗಳ ಬಳಿಕ ಕೇಸ್‌

GOVT%201

ಕಂಸಿ ವಿಶ್ವನಾಥ್‌ಗೆ ಕುಸ್ತಿಯಲ್ಲಿ ಪ್ರಥಮ

ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೌಕರ ಎನ್.ಮಾಲತೇಶ್‌ ಅವರು 78 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಾಲತೇಶ್‌ ಅವರು ಶಿವಮೊಗ್ಗ ತಾಲೂಕಿನ ಕುಂಸಿಯವರು. ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿದ್ದಾರೆ.

GOVT%202

Leave a Comment