ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 DECEMBER 2023
BENGALURU : ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್ ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದುಜ ಆ್ಯಪ್ ಬಿಡುಗಡೆ ಮಾಡಿದರು.
ಏನಿದು ಬಗರ್ ಹುಕುಂ ಆ್ಯಪ್?
ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.
ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಹಾಗೂ ಅರ್ಜಿಗಳ ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.
ಆ್ಯಪ್ ಹೇಗೆ ಕೆಲಸ ಮಾಡುತ್ತೆ?
ಗ್ರಾಮ ಲೆಕ್ಕಿಗ ಸ್ಥಳಕ್ಕೆ ತೆರಳಿ ಈ ಆ್ಯಪ್ ಮೂಲಕ ಜಿಯೋ ಫೆನ್ಸ್ ಮಾಡಿ ಆ ಮಾಹಿತಿಯನ್ನು ಕಂದಾಯ ನಿರೀಕ್ಷಕ ಹಾಗೂ ಸರ್ವೇ ಇಲಾಖೆ ಲಾಗಿನ್ಗೆ ಕಳುಹಿಸುತ್ತಾರೆ. ಇದರ ಸಹಾಯದಿಂದ ತಹಶೀಲ್ದಾರ್ ಸ್ಯಾಟಲೈಟ್ ಇಮೇಜ್ ಪಡೆದು ನಿಜಕ್ಕೂ ಅಲ್ಲಿ ಕೃಷಿ ನಡೆಸುತ್ತಿದ್ದಾರ ಎಂಬ ಮಾಹಿತಿ ಕಲೆಹಾಕುತ್ತಾರೆ. ಅಲ್ಲದೆ ಆ ಇಮೇಜ್ ಜೊತೆಗೆ ಎಲ್ಲಾ ಮಾಹಿತಿಯನ್ನು ಬಗರ್ ಹುಕುಂ ಕಮಿಟಿ ಮುಂದೆ ಸಲ್ಲಿಸಿ ಓಟಿಪಿ ಮೂಲಕ ಕೆವೈಸಿ ಮಾಡುವ ಮೂಲಕ ಋಜುವಾತು ಮಾಡುತ್ತಾರೆ.
ಇದನ್ನೂ ಓದಿ – ಸದ್ಯದಲ್ಲೆ ವಾಟ್ಸಪ್ನಲ್ಲಿ ರಿಲೀಸ್ ಆಗಲಿದೆ 3 ಹೊಸ ಫೀಚರ್, ಯಾವುದದು? ಏನದರ ಪ್ರಯೋಜನ?
ನಂತರ ಅರ್ಹ ಫಲಾನುಭವಿಗಳಿಗೆ ಪೇಮೆಂಟ್ ನೊಟೀಸ್ ನೀಡಿ ಹಣ ಪಾವತಿಯಾಗುತ್ತಿದ್ದಂತೆ ಅವರಿಗೆ ಹೊಸ ಸರ್ವೇ ನಂಬರ್ ಹಾಗೂ ಡಿಜಿಟಲ್ ಇ-ಸಾಗುವಳಿ ಚೀಟಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















