Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ವಿದ್ಯುತ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌ | ಪೋಡಿ, ಸರ್ವೆ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ – ಸರ್ಕಾರದ ಸುದ್ದಿ ಫಟಾಫಟ್‌

ವಿದ್ಯುತ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌ | ಪೋಡಿ, ಸರ್ವೆ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ – ಸರ್ಕಾರದ ಸುದ್ದಿ ಫಟಾಫಟ್‌

03/01/2024 11:06 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 4 JANUARY 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

KARNATAKA GOVERNMENT : ವಿದ್ಯುತ್‌ ಬಳಕೆದಾರರಿಗೆ ರಾಜ್ಯ ಸರ್ಕಾರ ಗುಡ್‌ FATAFAT-NEWS-1ನ್ಯೂಸ್‌ ನೀಡಿದೆ. ಜನವರಿ ತಿಂಗಳಲ್ಲಿ ವಿದ್ಯುತ್‌ ಬಿಲ್‌ ಹೊರೆ ತುಸು ಕಡಿಮೆಯಾಗಲಿದೆ. ನವೆಂಬರ್‌ ತಿಂಗಳಲ್ಲಿ ಇಂಧನ ಮತ್ತು ವಿದ್ಯುತ್‌ ಖರೀದಿ ಹೊಂದಾಣಿಕೆ ವೆಚ್ಚ ಇಳಿಕೆಯಾಗಿದೆ. ಆದ್ದರಿಂದ ಜನವರಿ ತಿಂಗಳ ವಿದ್ಯುತ್‌ ಬಿಲ್‌ನಲ್ಲಿ ಪ್ರತಿ ಯುನಿಟ್‌ಗೆ 3 ಪೈಸೆಯಿಂದ 51 ಪೈಸೆವರೆಗೂ ಕಡಿತ ಮಾಡಲು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ನಿರ್ಧರಿಸಿದೆ. ಈ ಸಂಬಂಧ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಲಾಗಿದೆ.

ಪೋಡಿ, ಸರ್ವೆ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ

FATAFAT-NEWS-2ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಲಾಗಿದೆ. ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್‌) ಸಲ್ಲಿಸುವ ಪ್ರತಿ ಅರ್ಜಿಗೆ ಪರಿಷ್ಕೃತ ಶುಲ್ಕ ನಿಗದಿ ಪಡಿಸಲಾಗಿದೆ. 11 ಇ ನಕ್ಷೆ, ತತ್ಕಾಲ್‌ ಪೋಡಿ, ಭೂ ಪರಿವರ್ತನೆ ಪೂರ್ವನಕ್ಷೆ ಶುಲ್ಕ ಪ್ರತಿ 2 ಎಕರೆಗೆ ನಗರ ಪ್ರದೇಶದಲ್ಲಿ 2500 ರೂ., ಗ್ರಾಮೀಣ ಭಾಗದಲ್ಲಿ 1500 ರೂ.  2 ಎಕರೆ ಬಳಿಕ ಪ್ರತಿ ಎಕರೆಗೆ ನಗರ ಪ್ರದೇಶದಲ್ಲಿ 1 ಸಾವಿರ ರೂ., ಗ್ರಾಮೀಣ ಭಾಗದಲ್ಲಿ 400 ರೂ. ನಿಗದಿಪಡಿಸಲಾಗಿದೆ. ಇನ್ನು, ಜಮೀನು ಹದ್ದುಬಸ್ತಿಗೆ 2 ಎಕರೆವರೆಗೆ ನಗರ ಪ್ರದೇಶದಲ್ಲಿ 2 ಸಾವಿರ ರೂ., ಗ್ರಾಮೀಣ ಭಾಗದಲ್ಲಿ 500 ರೂ., 2 ಎಕರೆಗಿಂತಲು ಹೆಚ್ಚಿನ ಜಾಗಕ್ಕೆ ನಗರ ಪ್ರದೇಶದಲ್ಲಿ ಪ್ರತಿ ಎಕರೆಗೆ 400 ರೂ., ಗ್ರಾಮೀಣ ಭಾಗದಲ್ಲಿ 300 ರೂ. ನಿಗದಿಪಡಿಸಲಾಗಿದೆ.

7 ಸಾವಿರ ರೈತರಿಗೆ ಹಕ್ಕುಪತ್ರ

FATAFAT-NEWS-3ಅರಣ್ಯ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿರುವ 7 ಸಾವಿರ ರೈತರಿಗೆ ಹಕ್ಕುಪತ್ರ ನೀಡಲಾಗುತ್ತಿದೆ. ನಿಗದಿತ ಅವಧಿ ಒಳಗೆ ಅರ್ಜಿ ಸಲ್ಲಿಸಿದ್ದವರಿಗೆ ಹಕ್ಕು ಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಉಚಿತ ಟಿಕೆಟ್‌ ಮೌಲ್ಯ 3 ಸಾವಿರ ಕೋಟಿ

Fatafat 3ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಚಿತ ಟಿಕೆಟ್‌ ಮೌಲ್ಯ 3 ಸಾವಿರ ಕೋಟಿ ರೂ.ಗೆ ತಲುಪಿದೆ. ಈವರೆಗೆ ಮಹಿಳಾ ಪ್ರಯಾಣಿಕರ ಸಂಖ್ಯೆ 126 ಕೋಟಿಗೆ ತಲುಪಿದೆ. ‘ಭವಿಷ್ಯದಲ್ಲಿ ಸೇವೆ ಇನ್ನಷ್ಟು ಉತ್ತಮವಾಗಲಿದೆ. ಯಾರಿಗು ತೊಂದರೆ ಆಗದಂತೆ ಅಗತ್ಯವಿರುವ ಕಡೆಗೆ ಹೆಚ್ಚುವರಿ ಬಸ್‌ ಓಡಿಸಲಾಗುತ್ತದೆʼ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ – ಮೇಲೆ ಸಚಿವರ ಸಭೆ, ಕೆಳಗೆ ಕರೆಂಟ್ ಇಲ್ಲದೆ ನೆಲದ ಮೇಲೆ ಕುಳಿತ ಜನ, ಶಿವಮೊಗ್ಗದಲ್ಲಿ ಇದೆಂಥಾ ಅವಸ್ಥೆ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article DINA-BHAVISHYA ಈ ರಾಶಿಗೆ ದೀರ್ಘಕಾಲದ ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ | ಯಾವ್ಯವ ರಾಶಿಗೆ ಹೇಗಿದೆ ಇವತ್ತು? – ದಿನ ಭವಿಷ್ಯ
Next Article Prakash-Travels-bus-mishap-at-Gilalagundi-in-sagra-road BREAKING NEWS – ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಅಪಘಾತ, ರಸ್ತೆ ಪಕ್ಕದ ಗುಂಡಿಗಿಳಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

ಇದನ್ನೂ ಓದಿ

naxal-kotehonda-ravi-surrenders-at-sringeri
STATE HIGHLIGHTS

ಮತ್ತೊಬ್ಬ ನಕ್ಸಲ್‌ ಶರಣಾಗತಿ, ಇವತ್ತು ಕೋಟೆಹೊಂಡ ರವಿ ಮುಖ್ಯವಾಹಿನಿಗೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/02/2025
rain in shimoga
STATE HIGHLIGHTS

ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌, ಮಳೆ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/12/2024
KARNATAKA-STATE-NEWS-UPDATE
STATE HIGHLIGHTS

ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/11/2024
BPL-Card-APL-Card-Ration-Card
STATE HIGHLIGHTS

ರಾಜ್ಯದಲ್ಲಿ ಒಟ್ಟು ಅನರ್ಹಗೊಂಡ BPL ಕಾರ್ಡುಗಳೆಷ್ಟು? ಇಲ್ಲಿದೆ ಡಿಟೇಲ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/11/2024
naxal-leader-vikram-gowda.
STATE HIGHLIGHTS

ಹೆಬ್ರಿಯಲ್ಲಿ ಎನ್‌ಕೌಂಟರ್‌, ನಕ್ಸಲ್‌ ನಾಯಕ ಬಲಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/11/2024
Kannada-News-Update
STATE HIGHLIGHTS

ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/11/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?