ವಿಧಾನಸಭೆಯಲ್ಲಿ ಶಿವಮೊಗ್ಗ ಉಪ ನೋಂದಣಾಧಿಕಾರಿ ಕಚೇರಿ ಕುರಿತು ಮಹತ್ವದ ಚರ್ಚೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 22 JULY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ವಿನೋಬನಗರದಲ್ಲಿರುವ ಉಪ ನೋಂದಣಾಧಿಕಾರಿ (Sub Registrar) ಕಚೇರಿ ಸ್ಥಳಾಂತರ ವಿಚಾರ ಇವತ್ತು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಯ್ತು. ಈ ಸಂಬಂಧ ಶಾಸಕ ಎಸ್‌.ಎನ್.ಚನ್ನಬಸಪ್ಪ ಸದನಲ್ಲಿ ಪ್ರಸ್ತಾಪಿಸಿದರು.

ಚನ್ನಬಸಪ್ಪ ಪ್ರಸ್ತಾಪ ಮಾಡಿದ್ದೇನು?

ಉಪ ನೋಂದಣಾಧಿಕಾರಿ ಕಚೇರಿ ಕಟ್ಟಡ ಅತ್ಯಂತ ಇಕ್ಕಟ್ಟಾಗಿದೆ. ಎಪಿಎಂಸಿ ಆವರಣಕ್ಕೆ ಅದನ್ನು ಸ್ಥಳಾಂತರ ಮಾಡಬೇಕು ಎಂದು ಬೆಳಗಾವಿ ಅಧಿವೇಶನದಲ್ಲಿಯೇ ಪ್ರಸ್ತಾಪಿಸಿದ್ದೆ. ಆದರೆ ಒಂದೂವರೆ ವರ್ಷವಾದರೂ ಸ್ಥಳಾಂತರವಾಗಿಲ್ಲ. ನಾಗರಿಕರ ಹಿತದೃಷ್ಟಿಯಿಂದ ಕೂಡಲೆ ಸ್ಥಳಾಂತರ ಮಾಡಿ ಎಂದು ಸದನದಲ್ಲಿ ಚನ್ನಬಸಪ್ಪ ಮನವಿ ಮಾಡಿದರು.

MLA-Channabasappa-and-minister-Krishna-Byregowda

ಕಂದಾಯ ಸಚಿವರು ಹೇಳಿದ್ದೇನು?

quote.webpಇದಕ್ಕೆ ಉತ್ತರ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಶಿವಮೊಗ್ಗದ ಉಪ ನೋಂದಣಾಧಿಕಾರಿ ಕಚೇರಿಗೆ ಈಚೆಗೆ ಭೇಟಿ ನೀಡಿದ್ದೆ. ಮೆಟ್ಟಿಲುಗಳು ಸಣ್ಣದಿವೆ. ಕಚೇರಿಯಲ್ಲಿ ಜನ ಕೂರಲು ಸ್ಥಳಾವಕಾಶವಿಲ್ಲ. ಅಂಗವಿಕಲರು ಮೊದಲ ಮಹಡಿಗೆ ಹತ್ತಿ ಹೋಗಲು ಕಷ್ಟವಾಗುತ್ತದೆ. ಶಿವಮೊಗ್ಗದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯಲ್ಲು ಸ್ಥಳಾಂತರದ ಚರ್ಚೆಯಾಗಿತ್ತು. ಆದರೆ ಕಚೇರಿ ಸ್ಥಳಾಂತರ ಮಾಡಬೇಕೋ, ಹೊಸ ಕಟ್ಟಡ ನಿರ್ಮಿಸಬೇಕೋ ಎಂಬ ಚರ್ಚೆಯಾಗುತ್ತಿದೆ. ಅದ್ದರಿಂದ ಪ್ರಕ್ರಿಯೆ ವಿಳಂಬವಾಗಿದೆ. ಇನ್ನೊಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಇನ್ನೊಂದು ತಿಂಗಳ ಒಳಗೆ ಎಲ್ಲವು ಸ್ಪಷ್ಟವಾಗಲಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಚನ್ನಬಸಪ್ಪ, ಸದ್ಯಕ್ಕೆ ಉಪ ನೋಂದಣಾಧಿಕಾರಿ ಕಚೇರಿಯನ್ನು ಎಪಿಎಂಸಿಗೆ ಸ್ಥಳಾಂತರ ಮಾಡಿ. ಆ ಬಳಿಕ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಎಂದರು. ಈ ಕುರಿತು ಅಧಿಕಾರಿಗಳ ಜೊತೆಗೆ ಸಮಾಲೋಚನೆ ಬಳಿಕ ನಿರ್ಧಾರ ಪ್ರಕಟಿಸುತ್ತೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಇದನ್ನೂ ಓದಿ ⇓

ಎರಡು ದಿನ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಿನಿಸ್ಟರ್‌ ಪರಿಶೀಲನೆ, ಎಲ್ಲೆಲ್ಲಿ ಭೇಟಿ ನೀಡಿದ್ದರು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment