ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್ ಸಮಸ್ಯೆ ನೀಗಿಸಲು ಸರ್ಕಾರದಿಂದ ಮಾರ್ಗಸೂಚಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Covid 19 Vaccination Kan poster 1 1

ಬೆಂಗಳೂರು : ಕರೋನ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಕುರಿತು ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬೆಡ್ ಮತ್ತು ವೆಂಟಿಲೇಟರ್​ ಕೊರತೆಯನ್ನು ನೀಗಿಸುವ ಸಲುವಾಗಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.

ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸುದ್ದಿಗೋಷ್ಠಿ ನಡೆಸಿ ನೂತನ ಮಾರ್ಗಸೂಚಿಯ ಕುರಿತು ತಿಳಿಸಿದರು.

ಸಚಿವರು ಹೇಳಿದ್ದೇನು? ಮಾರ್ಗಸೂಚಿಯಲ್ಲಿ ಏನಿದೆ?

ಪಾಸಿಟಿವ್ ಬಂದಿದೆ ಅಂದಾಕ್ಷಣ ಶೇ.90ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ. ಐಸೊಲೇಷನ್​ನಲ್ಲಿ ಇದ್ದುಕೊಂಡು ಚಿಕಿತ್ಸೆ ಪಡೆಯಬಹುದಾಗಿದೆ. ಇದಕ್ಕಾಗಿ ಪ್ರತ್ಯೇಕ್ಷ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಸ್ಪತ್ರೆಗಳಿಗೂ ಈ ಮಾರ್ಗಸೂಚಿ ತಿಳಿಸಲಾಗಿದೆ.

ಜೂನ್​​ವರೆಗೆ ಔಷಧಕ್ಕಾಗಿ 81.32 ಕೋಟಿ ರೂ. ಅಂದಾಜು ಮಾಡಿ ಕ್ಯಾಬಿನೆಟ್​ನಲ್ಲಿ ಅನುಮತಿ ಪಡೆಯಲಾಗಿದೆ. ಲಸಿಕೆಗೆ 400 ಕೋಟಿ ರೂ., ರೆಮಿಡಿಸ್ವೀರ್ 28 ಕೋಟಿ ರೂ. ಮಂಜೂರು ಮಾಡಲಾಗಿದೆ.

ಇದನ್ನೂ ಓದಿ – ರಾಜ್ಯದಲ್ಲಿ 14 ದಿನ ಬಿಗಿ ಕ್ರಮ ಘೋಷಣೆ, ಏನಿರುತ್ತೆ? ಏನಿರಲ್ಲ?

ಬೆಂಗಳೂರಿನಲ್ಲಿ ವಿಕ್ಟೋರಿಯಾ ಮತ್ತು ಬೌರಿಂಗ್ ಆಸ್ಪತ್ರೆಯಲ್ಲಿ ಇನ್ನು ಎಂಟು ಹತ್ತು ದಿನದಲ್ಲಿ ಹೆಚ್ಚುವರಿ 250 ಹಾಸಿಗೆ ಜೋಡಣೆಯಾಗಲಿದೆ.

ಐಸಿಯು, ವೆಂಟಿಲೇಟರ್ ಸೇರಿ, ಎಲ್ಲಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂರು ಸಾವಿರ ಹಾಸಿಗೆಗಳನ್ನು ಹೆಚ್ಚಳ ಮಾಡಲಾಗುತ್ತದೆ.

ಒಂದೇ ಮೆಷಿನ್​ನಲ್ಲಿ ಇಬ್ಬರಿಗೆ ಆಕ್ಸಿಜನ್ ಪೂರೈಕೆ ಮಾಡುವ ಪೋರ್ಟಬಲ್ ಆಕ್ಸಿಜನ್ ಕಾನ್ಸನ್​ಟ್ರೇಟರ್​ಗಳನ್ನು ಅಳವಿಡಿಸುವುದು.  ಕೋವಿಡ್ ಕೇರ್ ಸೆಂಟರ್​ ಮತ್ತು ಹೊಟೇಲ್​ಗಳಲ್ಲಿ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಸ್ಥಾಪಿಸಿ ಚಿಕಿತ್ಸೆ ನೀಡಲಾಗುತ್ತದೆ.

ಹೋಂ ಕ್ವಾರಂಟೈನ್​​ನಲ್ಲಿ ಇರುವವರೊಂದಿಗೆ ಪ್ರತಿದಿನ ವೈದ್ಯರು ಮಾತನಾಡಿ, , ಸ್ಥೈರ್ಯ ಮತ್ತು ಮಾರ್ಗದರ್ಶನ ನೀಡಲು ಕ್ರಮ. ಇನ್ನೊಂದೆರಡು ದಿನದಲ್ಲಿ ಒಂದು ಸಾವಿರ ಜನರು ಇರುವ ಕಾಲ್​ ಸೆಂಟರ್​ಗಳನ್ನು ಸ್ಥಾಪಿಸಲು ಕ್ರಮ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment