ಕರ್ನಾಟಕದ 10 ಪ್ರಮುಖ ಸುದ್ದಿ | ಒಂದೇ ನಿಮಿಷದ ಓದು | ಫಟಾಫಟ್‌ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 MARCH 2024

Speed News 1ಬೆಂಗಳೂರು / ಶಿವಮೊಗ್ಗ : ರಾಮೇಶ್ವರಂ ಕೆಫೆ ಹೊಟೇಲ್‌ನಲ್ಲಿ ಸಂಭವಿಸಿದ ಬಾಂಬ್‌ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ದಾಳಿ ನಡೆಸಿ, ಪರಿಶೀಲಿಸಿದರು.


Speed News 2ಬೆಂಗಳೂರು : ಆದಾಯಕ್ಕೂ ಮೀರು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ 13 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧೆಡೆ 60 ಕಡೆ ಶೋಧ ಕಾರ್ಯಾಚರಣೆ ನಡೆಸಲಾಯಿತು. ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಆಸ್ತಿ, ವಾಹನಗಳ ದಾಖಲೆಗಳು ವಶಕ್ಕೆ.


Speed News 3ಬೆಂಗಳೂರು : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. 14 ಕ್ಷೇತ್ರಗಳಲ್ಲಿ ಇವತ್ತು ಅಧಿಸೂಚನೆ ಹೊರಡಿಸಲಾಗುತ್ತದೆ. ಏ.4 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಈ ಕ್ಷೇತ್ರಗಳಲ್ಲಿ ಏ.26ರಂದು ಮತದಾನ ನಡೆಯಲಿದೆ.  


Speed News 4ಚಾಮರಾಜನಗರ : ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹಾದೇಶ್ವರ ದೇಗುಲದ ಹುಂಡಿಗಳಲ್ಲಿ ಕಳೆದ 25 ದಿನದಲ್ಲಿ 3.13 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಈವರೆಗೂ ತಿಂಗಳಿಗೆ 2.90 ಕೋಟಿ ರೂ. ಕಾಣಿಕೆ ಸಂಗ್ರಹವಾಗುತ್ತಿತ್ತು. ಈ ಬಾರಿ ಕಾಣಿಕೆ ಹಣ ಎಣಿಕೆ ವೇಳೆ ಎರಡು ಅಮೆರಿಕನ್‌ ಡಾಲರ್‌, ಒಂದು ಬಾಂಗ್ಲಾದೇಶದ ನೋಟು, ನೇಪಾಳದ ಎರಡು ನೋಟು, ಮಲೇಷಿಯಾದ ಒಂದು ನೋಟು ಸಿಕ್ಕಿದೆ.


Speed News 5ಧಾರವಾಡ : ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಗುರುಲಿಂಗ ಕಾಪಸೆ (96) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೇಹ ದಾನ ಮಾಡಿದ್ದರಿಂದ ಅವರ ಪಾರ್ಥೀವ ಶರೀರವನ್ನು ಬೈಲಹೊಂಗಲದ ಡಾ. ಮಹಾಂತೇಶ ರಾಮಣ್ಣವರ ಆಸ್ಪತ್ರೆಗೆ ನೀಡಲು ಕುಟುಂಬದವರು ಸಿದ್ಧತೆ ಮಾಡಿಕೊಂಡಿದ್ದಾರೆ.


Speed News 6ಬಳ್ಳಾರಿ : ಪಿಯುಸಿ ದ್ವಿತೀಯ ವರ್ಷದ ಉತ್ತರ ಪತ್ರಿಕೆ ಮೌಲ್ಯಮಾಪನ ವೇಳೆ ಉಪನ್ಯಾಸಕ ಶಂಕರಗೌಡ (42) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಳ್ಳಾರಿಯ ಸಂತ ಜಾನ್‌ ಪಿಯು ಕಾಲೇಜಿನಲ್ಲಿ ಮೌಲ್ಯಮಾಪನದ ವೇಳೆ ಘಟನೆ ಸಂಭವಿಸಿದೆ. ಶಂಕರಗೌಡ ಅವರು ಮಸ್ಕಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿದ್ದರು.


Speed News 7ಬೆಂಗಳೂರು : ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ನಕಲು ಮಾಡಿದ 9 ವಿದ್ಯಾರ್ಥಿಗಳನ್ನು ಬುಧವಾರ ಡಿಬಾರ್‌ ಮಾಡಲಾಗಿದೆ. ಧಾರವಾಡದಲ್ಲಿ 4, ರಾಯಚೂರಿನಲ್ಲಿ 3, ಕಲಬುರಗಿ ಮತ್ತು ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ತಲಾ ಒಬ್ಬರನ್ನು ಡಿಬಾರ್‌ ಮಾಡಲಾಗಿದೆ.


Speed News 8ಕಾರವಾರ : ಉತ್ತಮ ಮಳೆಗಾಗಿ ಪ್ರಾರ್ಥಿಸಿ ಕಾಳಿ ನದಿ ಸಮುದ್ರ ಸೇರುವ ಸಂಗಮ ಸ್ಥಳದಲ್ಲಿ ದೋಣಿಯಲ್ಲಿ ಲಿಂಗ ಪೂಜೆ ಮತ್ತು ವರುಣ ಹೋಮ ನಡೆಸಲಾಯಿತು. ಬೆಂಗಳೂರಿನಿಂದ ಆಗಮಿಸಿದ್ದ ವೈದಿಕರ ತಂಡ ಪೂಜೆ ಸಲ್ಲಿಸಿದೆ. ಹಿಂದೆ ಇದೇ ರೀತಿ ಹೋಮ ಮಾಡಿದ್ದಾಗ ಉತ್ತಮ ಮಳೆಯಾಗಿತ್ತು.


Speed News 9ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗುತ್ತಿದೆ. ಎರಡು ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್‌, ಬಾಗಲಕೋಟೆಯಲ್ಲಿ 40.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್‌ ತಿಂಗಳಲ್ಲಿ ರಾಜ್ಯದಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಂಭವವಿದೆ.


Speed News 10ಬೆಂಗಳೂರು : ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಲಿದೆ. ಈ ಹಿನ್ನೆಲೆ ಮುಂಚಿತವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಮರ್ಪಕ ವಿದ್ಯುತ್‌ ಪೂರೈಕೆ ಸರ್ಕಾರದ ಆದ್ಯತೆಯಾಗಿದೆ. ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇರುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ಇದನ್ನೂ ಓದಿ – ಅಡಿಕೆ ಧಾರಣೆ | 27 ಮಾರ್ಚ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 28, 2024

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment