Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಕರ್ನಾಟಕದ 10 ಪ್ರಮುಖ ಸುದ್ದಿ | ಒಂದೇ ನಿಮಿಷದ ಓದು | ಫಟಾಫಟ್‌ ಸುದ್ದಿ

ಕರ್ನಾಟಕದ 10 ಪ್ರಮುಖ ಸುದ್ದಿ | ಒಂದೇ ನಿಮಿಷದ ಓದು | ಫಟಾಫಟ್‌ ಸುದ್ದಿ

28/03/2024 7:29 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 28 MARCH 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Speed News 1ಬೆಂಗಳೂರು / ಶಿವಮೊಗ್ಗ : ರಾಮೇಶ್ವರಂ ಕೆಫೆ ಹೊಟೇಲ್‌ನಲ್ಲಿ ಸಂಭವಿಸಿದ ಬಾಂಬ್‌ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ದಾಳಿ ನಡೆಸಿ, ಪರಿಶೀಲಿಸಿದರು.


Speed News 2ಬೆಂಗಳೂರು : ಆದಾಯಕ್ಕೂ ಮೀರು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ 13 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧೆಡೆ 60 ಕಡೆ ಶೋಧ ಕಾರ್ಯಾಚರಣೆ ನಡೆಸಲಾಯಿತು. ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಆಸ್ತಿ, ವಾಹನಗಳ ದಾಖಲೆಗಳು ವಶಕ್ಕೆ.


Speed News 3ಬೆಂಗಳೂರು : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. 14 ಕ್ಷೇತ್ರಗಳಲ್ಲಿ ಇವತ್ತು ಅಧಿಸೂಚನೆ ಹೊರಡಿಸಲಾಗುತ್ತದೆ. ಏ.4 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಈ ಕ್ಷೇತ್ರಗಳಲ್ಲಿ ಏ.26ರಂದು ಮತದಾನ ನಡೆಯಲಿದೆ.  


Speed News 4ಚಾಮರಾಜನಗರ : ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹಾದೇಶ್ವರ ದೇಗುಲದ ಹುಂಡಿಗಳಲ್ಲಿ ಕಳೆದ 25 ದಿನದಲ್ಲಿ 3.13 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಈವರೆಗೂ ತಿಂಗಳಿಗೆ 2.90 ಕೋಟಿ ರೂ. ಕಾಣಿಕೆ ಸಂಗ್ರಹವಾಗುತ್ತಿತ್ತು. ಈ ಬಾರಿ ಕಾಣಿಕೆ ಹಣ ಎಣಿಕೆ ವೇಳೆ ಎರಡು ಅಮೆರಿಕನ್‌ ಡಾಲರ್‌, ಒಂದು ಬಾಂಗ್ಲಾದೇಶದ ನೋಟು, ನೇಪಾಳದ ಎರಡು ನೋಟು, ಮಲೇಷಿಯಾದ ಒಂದು ನೋಟು ಸಿಕ್ಕಿದೆ.


Speed News 5ಧಾರವಾಡ : ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಗುರುಲಿಂಗ ಕಾಪಸೆ (96) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೇಹ ದಾನ ಮಾಡಿದ್ದರಿಂದ ಅವರ ಪಾರ್ಥೀವ ಶರೀರವನ್ನು ಬೈಲಹೊಂಗಲದ ಡಾ. ಮಹಾಂತೇಶ ರಾಮಣ್ಣವರ ಆಸ್ಪತ್ರೆಗೆ ನೀಡಲು ಕುಟುಂಬದವರು ಸಿದ್ಧತೆ ಮಾಡಿಕೊಂಡಿದ್ದಾರೆ.


Speed News 6ಬಳ್ಳಾರಿ : ಪಿಯುಸಿ ದ್ವಿತೀಯ ವರ್ಷದ ಉತ್ತರ ಪತ್ರಿಕೆ ಮೌಲ್ಯಮಾಪನ ವೇಳೆ ಉಪನ್ಯಾಸಕ ಶಂಕರಗೌಡ (42) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಳ್ಳಾರಿಯ ಸಂತ ಜಾನ್‌ ಪಿಯು ಕಾಲೇಜಿನಲ್ಲಿ ಮೌಲ್ಯಮಾಪನದ ವೇಳೆ ಘಟನೆ ಸಂಭವಿಸಿದೆ. ಶಂಕರಗೌಡ ಅವರು ಮಸ್ಕಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿದ್ದರು.


Speed News 7ಬೆಂಗಳೂರು : ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ನಕಲು ಮಾಡಿದ 9 ವಿದ್ಯಾರ್ಥಿಗಳನ್ನು ಬುಧವಾರ ಡಿಬಾರ್‌ ಮಾಡಲಾಗಿದೆ. ಧಾರವಾಡದಲ್ಲಿ 4, ರಾಯಚೂರಿನಲ್ಲಿ 3, ಕಲಬುರಗಿ ಮತ್ತು ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ತಲಾ ಒಬ್ಬರನ್ನು ಡಿಬಾರ್‌ ಮಾಡಲಾಗಿದೆ.


Speed News 8ಕಾರವಾರ : ಉತ್ತಮ ಮಳೆಗಾಗಿ ಪ್ರಾರ್ಥಿಸಿ ಕಾಳಿ ನದಿ ಸಮುದ್ರ ಸೇರುವ ಸಂಗಮ ಸ್ಥಳದಲ್ಲಿ ದೋಣಿಯಲ್ಲಿ ಲಿಂಗ ಪೂಜೆ ಮತ್ತು ವರುಣ ಹೋಮ ನಡೆಸಲಾಯಿತು. ಬೆಂಗಳೂರಿನಿಂದ ಆಗಮಿಸಿದ್ದ ವೈದಿಕರ ತಂಡ ಪೂಜೆ ಸಲ್ಲಿಸಿದೆ. ಹಿಂದೆ ಇದೇ ರೀತಿ ಹೋಮ ಮಾಡಿದ್ದಾಗ ಉತ್ತಮ ಮಳೆಯಾಗಿತ್ತು.


Speed News 9ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗುತ್ತಿದೆ. ಎರಡು ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್‌, ಬಾಗಲಕೋಟೆಯಲ್ಲಿ 40.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್‌ ತಿಂಗಳಲ್ಲಿ ರಾಜ್ಯದಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಂಭವವಿದೆ.


Speed News 10ಬೆಂಗಳೂರು : ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಲಿದೆ. ಈ ಹಿನ್ನೆಲೆ ಮುಂಚಿತವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಮರ್ಪಕ ವಿದ್ಯುತ್‌ ಪೂರೈಕೆ ಸರ್ಕಾರದ ಆದ್ಯತೆಯಾಗಿದೆ. ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇರುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ಇದನ್ನೂ ಓದಿ – ಅಡಿಕೆ ಧಾರಣೆ | 27 ಮಾರ್ಚ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Mesh-for-tunga-river-bridge-in-Shimoga ಶಿವಮೊಗ್ಗದ ತುಂಗಾ ನದಿ ಸೇತುವೆಗಳಿಗೆ ಜಾಲರಿ ಅಳವಡಿಕೆ, ಕಾರಣವೇನು?
Next Article Rope-Way-Pooja-for-Sigandur-Bridge-in-Sagara ಸಿಗಂದೂರು ಸೇತುವೆ, ರೋಪ್‌ ವೇ ಅಳವಡಿಕೆ ಶುರು, ಏನಿದು ರೋಪ್‌ ವೇ?

ಇದನ್ನೂ ಓದಿ

naxal-kotehonda-ravi-surrenders-at-sringeri
STATE HIGHLIGHTS

ಮತ್ತೊಬ್ಬ ನಕ್ಸಲ್‌ ಶರಣಾಗತಿ, ಇವತ್ತು ಕೋಟೆಹೊಂಡ ರವಿ ಮುಖ್ಯವಾಹಿನಿಗೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/02/2025
rain in shimoga
STATE HIGHLIGHTS

ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌, ಮಳೆ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/12/2024
KARNATAKA-STATE-NEWS-UPDATE
STATE HIGHLIGHTS

ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/11/2024
BPL-Card-APL-Card-Ration-Card
STATE HIGHLIGHTS

ರಾಜ್ಯದಲ್ಲಿ ಒಟ್ಟು ಅನರ್ಹಗೊಂಡ BPL ಕಾರ್ಡುಗಳೆಷ್ಟು? ಇಲ್ಲಿದೆ ಡಿಟೇಲ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/11/2024
naxal-leader-vikram-gowda.
STATE HIGHLIGHTS

ಹೆಬ್ರಿಯಲ್ಲಿ ಎನ್‌ಕೌಂಟರ್‌, ನಕ್ಸಲ್‌ ನಾಯಕ ಬಲಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/11/2024
Kannada-News-Update
STATE HIGHLIGHTS

ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/11/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?