ಮತ್ತೊಬ್ಬ ನಕ್ಸಲ್‌ ಶರಣಾಗತಿ, ಇವತ್ತು ಕೋಟೆಹೊಂಡ ರವಿ ಮುಖ್ಯವಾಹಿನಿಗೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS, 1 FEBRUARY 2025

ಶೃಂಗೇರಿ : ನಕ್ಸಲ್‌ ಚಳವಳಿಯಲ್ಲಿ (Naxal) ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್‌ ರವೀಂದ್ರ ನೆಮ್ಮಾರ್‌ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ ರವಿ ಅವರು ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ ಎಂದು ಪ್ರಗತಿಪರ ಹೋರಾಟಗಾರ ಕೆ.ಎಲ್.ಅಶೋಕ್‌ ಮಾಹಿತಿ ನೀಡಿದ್ದಾರೆ.

naxal-kotehonda-ravi-surrenders-at-sringeri

ನಕ್ಸಲ್‌ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಕೆ.ವಸಂತ, ಜಿಶಾ, ಮಾರೆಪ್ಪ ಅರೋಲಿ ಈಚೆಗೆ ಶರಣಾಗಿದ್ದರು. ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರ ಪ್ರಯತ್ನದಿಂದ ಈಗ ಕೋಟೆಹೊಂಡ ರವಿ ಶರಣಾಗತಿಯಾಗಿದ್ದು, ರಾಜ್ಯದ ಎಲ್ಲ ನಕ್ಸಲರು ಮುಖ್ಯವಾಹಿನಿಗೆ ಬಂದಂತಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ಹೆಲ್ಪ್‌ಲೈನ್‌ ಶುರು, ವಾಟ್ಸಪ್‌ನಲ್ಲೇ ದಾಖಲಿಸಬಹುದು ದೂರು

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment