SHIVAMOGGA LIVE NEWS, 1 FEBRUARY 2025
ಶೃಂಗೇರಿ : ನಕ್ಸಲ್ ಚಳವಳಿಯಲ್ಲಿ (Naxal) ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ ರವಿ ಅವರು ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ ಎಂದು ಪ್ರಗತಿಪರ ಹೋರಾಟಗಾರ ಕೆ.ಎಲ್.ಅಶೋಕ್ ಮಾಹಿತಿ ನೀಡಿದ್ದಾರೆ.
ನಕ್ಸಲ್ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಕೆ.ವಸಂತ, ಜಿಶಾ, ಮಾರೆಪ್ಪ ಅರೋಲಿ ಈಚೆಗೆ ಶರಣಾಗಿದ್ದರು. ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರ ಪ್ರಯತ್ನದಿಂದ ಈಗ ಕೋಟೆಹೊಂಡ ರವಿ ಶರಣಾಗತಿಯಾಗಿದ್ದು, ರಾಜ್ಯದ ಎಲ್ಲ ನಕ್ಸಲರು ಮುಖ್ಯವಾಹಿನಿಗೆ ಬಂದಂತಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ಹೆಲ್ಪ್ಲೈನ್ ಶುರು, ವಾಟ್ಸಪ್ನಲ್ಲೇ ದಾಖಲಿಸಬಹುದು ದೂರು