STATE NEWS, 19 NOVEMBER 2024 : ರಾಜ್ಯದಲ್ಲಿ ಪುನಃ ನಕ್ಸಲರ ಗುಂಡಿನ ಸದ್ದು ಕೇಳಿಸಿದೆ. ಕಳೆದ ರಾತ್ರಿ ನಕ್ಸಲ್ ನಿಗ್ರಹ ಪಡೆ ಮತ್ತು ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು ನಕ್ಸಲ್ ನಾಯಕ (Leader) ವಿಕ್ರಂ ಗೌಡ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ವಿಕ್ರಂ ಗೌಡ ಮೂಲತಃ ಉಡುಪಿ ಜಿಲ್ಲೆಯ ಕಬ್ಬಿನಾಲೆಯವನು. ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ. ಕಬ್ಬಿನಾಲೆಯಲ್ಲೆ ಕಳದ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ.
![]() |
ಕಳೆದ ರಾತ್ರಿ ಆಗಿದ್ದೇನು?
ಪಶ್ಚಿಮಘಟ್ಟ ಭಾಗದಲ್ಲಿ ಪುನಃ ನಕ್ಸಲ್ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆ ಪೊಲೀಸ್ ಇಲಾಖೆ ಅಲರ್ಟ್ ಆಗಿತ್ತು. ಹೆಬ್ರಿ ಭಾಗದ ಕಬ್ಬಿನಾಲೆಯ ಪೀತೆಬೈಲು ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ನಕ್ಸಲರ ಇರುವಿಕೆ ಕುರಿತ ಮಾಹಿತಿ ಹಿನ್ನೆಲೆ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಶಾಸಕರ ಖರೀದಿಗೆ ಕಾಂಗ್ರೆಸ್ ಪಕ್ಷದೊಳಗೆ ಪೈಪೋಟಿ’
ಗಂಡಿನ ದಾಳಿಯಲ್ಲಿ ವಿಕ್ರಂಗೌಡ ಹತನಾಗಿದ್ದಾನೆ. ಉಳಿದ ನಾಲ್ವರು ನಕ್ಸಲರು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಬ್ಬಿನಾಲೆ ಮತ್ತು ಪೀತೆಬೈಲು ಅರಣ್ಯ ಪ್ರದೇಶವು ಆಗುಂಬೆಯ ಪಕ್ಕದಲ್ಲಿಯೇ ಇದೆ. ಹಾಗಾಗಿ ಆಗುಂಬೆ ಭಾಗದಲ್ಲಿಯು ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200