ಶಾಲೆ, ಕಾಲೇಜು ರಜೆ ವಿಚಾರ, ಸಿಎಂ ಕಚೇರಿಯಿಂದ ಸ್ಪಷ್ಟನೆ

ಬೆಂಗಳೂರು: ವೃಕ್ಷಮಾತೆ ನಾಡೋಜ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆ ಶನಿವಾರ ಸರ್ಕಾರಿ ರಜೆ ನೀಡಲಾಗಿದೆ ಎಂಬ ನಕಲಿ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಲ್ಲೇಖವಾಗಿದ್ದ ಪರಿಣಾಮ ಗೊಂದಲ ಉಂಟಾಗಿತ್ತು. ಕೊನೆಗೆ ಮುಖ್ಯಮಂತ್ರಿಯವರ ಕಚೇರಿ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಸ್ಪಷ್ಟಪಡಿಸಿದೆ. ಶನಿವಾರ ಎಂದಿನಂತೆ ಶಾಲಾ, ಕಾಲೇಜು ಮತ್ತು ಸರ್ಕಾರಿ ಕಚೇರಿಗಳು ಕೆಲಸ ಕಾರ್ಯ ನಿರ್ವಹಿಸಲಿವೆ ಎಂದು ಸಿಎಂ ಕಚೇರಿ ತಿಳಿಸಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ, ಇಲ್ಲಿದೆ ಕಂಪ್ಲೀಟ್‌ ಮಾಹಿತಿ

Leave a Comment