ಶಿವಮೊಗ್ಗದ ಒಂದು ರೈಲ್ವೆ ನಿಲ್ದಾಣ ಸೇರಿ ರಾಜ್ಯದ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು

ಬೆಂಗಳೂರು: ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯ ಸೂರಗೊಂಡನಕೊಪ್ಪ ರೈಲ್ವೆ ನಿಲ್ದಾಣಗಳಿಗೆ ಹೊಸ ನಾಮಕರಣ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಪತ್ರ ಬರೆದಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಶ್ರೀ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಪ್ರಸ್ತಾಪಿಸಿದ್ದಾರೆ. ಸರ್ಕಾರ ಈ ನಿಲ್ದಾಣಗಳಿಗೆ ಸಂತರ ಹೆಸರು ನಾಮಕರಣ ಮಾಡಲು ಶಿಫಾರಸು ಮಾಡಿದ್ದು, ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ ಎಂದು ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

Minister-MB-Patil-Speaks-to-media-at-Shimoga-Airport.
File Photo

ಈ ರೈಲು ನಿಲ್ದಾಣಗಳು ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಈ ಶಿಫಾರಸನ್ನು ಅಂಗೀಕರಿಸಿ, ಮರು ನಾಮಕರಣದ ವಿಷಯವನ್ನು ಶೀಘ್ರ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರಸ್ತೆಗೆ ಅಡ್ಡ ಬಿತ್ತು ರೆಂಬೆ, ನಾಗರಿಕ ಪ್ರಜ್ಞೆ ಮೆರೆದ ವಿದ್ಯಾರ್ಥಿಗಳು, ತಪ್ಪಿತು ಟ್ರಾಫಿಕ್‌ ಜಾಮ್‌

Leave a Comment