ಸರ್ಕಾರಿ ಕೆಲಸ, ನೇಮಕಾತಿಯಲ್ಲಿ ಈ ವರ್ಗಕ್ಕೆ 2 ಪರ್ಸೆಂಟ್‌ ಮೀಸಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JUST MAHITI : ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ (Job) ನೇಮಕಾತಿ ವೇಳೆ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಹುದ್ದೆಗಳು ಮೀಸಲಿಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಈ ಸಂಬಂಧ ರಾಜ್ಯ ಸಿವಿಲ್‌ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ತಂದಿದೆ.

ಏನೆಲ್ಲ ತಿದ್ದುಪಡಿ ತರಲಾಗಿದೆ?

ರಾಜ್ಯ ಸರ್ಕಾರದ ಗ್ರೂಪ್‌ ಎ, ಬಿ, ಸಿ ಮತ್ತು ಡಿ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ವೇಳೆ ಅರ್ಜಿಯಲ್ಲಿ ಕ್ರೀಡಾಪಟುಗಳಿಗೆ ಪ್ರತ್ಯೇಕ ಕಾಲಂ ಮೀಸಲಿಡಬೇಕು. ಕರ್ನಾಟಕವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. ಗುಂಪು ಕ್ರೀಡೆಗಿಂತಲು ವೈಯಕ್ತಿಕ ಕ್ರೀಡೆಯಲ್ಲಿ ಗೆದ್ದವರಿಗೆ ಮೊದಲ ಆದ್ಯತೆ ಸಿಗಲಿದೆ ಎಂದು ರಾಜ್ಯಪತ್ರದಲ್ಲಿ ತಿಳಿಸಲಾಗಿದೆ.

VIDHANA-SOUDHA-GENERAL-IMAGE.jpg

ಯಾವೆಲ್ಲ ಕ್ರೀಡೆಗೆ ಮೀಸಲು ಸಿಗಲಿದೆ?

ರಾಜ್ಯ ಸರ್ಕಾರ 33 ಕ್ರೀಡೆಗಳನ್ನು ಗುರುತಿಸಿದೆ. ಈ ಕ್ರೀಡೆಗಳಲ್ಲಿ ಭಾಗವಹಿಸಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಮೀಸಲು ಅನ್ವಯವಾಗಲಿದೆ. ಅಥ್ಲೆಟಿಕ್ಸ್, ಆರ್ಚರಿ, ಬ್ಯಾಸ್ಕೆಟ್ ಬಾಲ್, ಬಾಕ್ಸಿಂಗ್, ಸೈಕ್ಲಿಂಗ್‌, ಜಿಮ್ನಾಸ್ಟಿಕ್ಸ್, ಹಾಕಿ, ಕಬಡ್ಡಿ, ರೈಫಲ್ ಶೂಟಿಂಗ್, ವಾಲಿಬಾಲ್, ವೆಯ್ಟ್‌ ಲಿಫ್ಟಿಂಗ್, ನೆಟ್ ಬಾಲ್, ಪವರ್ ಲಿಫ್ಟಿಂಗ್, ಯೋಗ, ಬೇಸ್ ಬಾಲ್, ರೆಸಲಿಂಗ್, ಸ್ವಿಮ್ಮಿಂಗ್ (ಅಕ್ವಟಿಕ್), ಜೂಡೋ, ಕ್ರಿಕೆಟ್‌, ಖೋ-ಖೋ, ಟೇಬಲ್ ಟೆನ್ನಿಸ್, ಹ್ಯಾಂಡ್‌ ಬಾಲ್‌, ವಾಟರ್‌ ಸ್ಪೋರ್ಟ್ಸ್‌ ರೋಯಿಂಗ್‌, ವಾಟರ್ ಸ್ಪೋರ್ಟ್ಸ್ – ಕಯಾಕಿಂಗ್, ವಾಟರ್‌ ಸ್ಪೋರ್ಟ್ಸ್‌ – ಕೆನೊಯಿಂಗ್, ಲಾನ್ ಟೆನಿಸ್, ಬ್ಯಾಡ್ಮಿಂಟನ್‌, ಸೇಪಕ್ ಟಕ್ರಾ, ಟೇಕ್ವಾಂಡೋ, ಪ್ಯಾರಾ ಲಾನ್ ಬೌಲ್, ಪ್ಯಾರಾ ಟೆನ್‌ಪಿನ್ ಬೌಲಿಂಗ್ ಆಟಗಳಲ್ಲಿ ಭಾಗವಹಿಸಿದ ಪ್ರತಿಭಾವಂತರಿಗೆ ಮೀಸಲು ಸಿಗಲಿದೆ.

ಎಷ್ಟು ಗ್ರೇಡಿಂಗ್‌ ಅಥವಾ ಕೃಪಾಂಕ ಸಿಗಲಿದೆ?

ಇನ್ನು ಗ್ರೇಡಿಂಗ್‌ ಅಥವಾ ಕೃಪಾಂಕದ ಕುರಿತು ನಿಯಮಗಳಲ್ಲಿ ತಿಳಿಸಲಾಗಿದೆ. ವಿವಿಧ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಪಡೆದವರಿಗೆ ಕೃಪಾಂಕ ನಿಗದಿಪಡಿಸಲಾಗಿದೆ. 75 ರಿಂದ 46ರವರೆಗೆ ಗ್ರೇಡಿಂಗ್‌ ದೊರೆಯಲಿದೆ.

ಇದನ್ನೂ ಓದಿ » ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‌ಗೆ ವಿಮಾನ, ಟೈಮಿಂಗ್‌ ಏನು? ಟಿಕೆಟ್‌ ಬುಕಿಂಗ್‌ ಹೇಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment