JUST MAHITI : ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ (Job) ನೇಮಕಾತಿ ವೇಳೆ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಹುದ್ದೆಗಳು ಮೀಸಲಿಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಈ ಸಂಬಂಧ ರಾಜ್ಯ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ತಂದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಏನೆಲ್ಲ ತಿದ್ದುಪಡಿ ತರಲಾಗಿದೆ?
ರಾಜ್ಯ ಸರ್ಕಾರದ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ವೇಳೆ ಅರ್ಜಿಯಲ್ಲಿ ಕ್ರೀಡಾಪಟುಗಳಿಗೆ ಪ್ರತ್ಯೇಕ ಕಾಲಂ ಮೀಸಲಿಡಬೇಕು. ಕರ್ನಾಟಕವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. ಗುಂಪು ಕ್ರೀಡೆಗಿಂತಲು ವೈಯಕ್ತಿಕ ಕ್ರೀಡೆಯಲ್ಲಿ ಗೆದ್ದವರಿಗೆ ಮೊದಲ ಆದ್ಯತೆ ಸಿಗಲಿದೆ ಎಂದು ರಾಜ್ಯಪತ್ರದಲ್ಲಿ ತಿಳಿಸಲಾಗಿದೆ.

ಯಾವೆಲ್ಲ ಕ್ರೀಡೆಗೆ ಮೀಸಲು ಸಿಗಲಿದೆ?
ರಾಜ್ಯ ಸರ್ಕಾರ 33 ಕ್ರೀಡೆಗಳನ್ನು ಗುರುತಿಸಿದೆ. ಈ ಕ್ರೀಡೆಗಳಲ್ಲಿ ಭಾಗವಹಿಸಿದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಮೀಸಲು ಅನ್ವಯವಾಗಲಿದೆ. ಅಥ್ಲೆಟಿಕ್ಸ್, ಆರ್ಚರಿ, ಬ್ಯಾಸ್ಕೆಟ್ ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಜಿಮ್ನಾಸ್ಟಿಕ್ಸ್, ಹಾಕಿ, ಕಬಡ್ಡಿ, ರೈಫಲ್ ಶೂಟಿಂಗ್, ವಾಲಿಬಾಲ್, ವೆಯ್ಟ್ ಲಿಫ್ಟಿಂಗ್, ನೆಟ್ ಬಾಲ್, ಪವರ್ ಲಿಫ್ಟಿಂಗ್, ಯೋಗ, ಬೇಸ್ ಬಾಲ್, ರೆಸಲಿಂಗ್, ಸ್ವಿಮ್ಮಿಂಗ್ (ಅಕ್ವಟಿಕ್), ಜೂಡೋ, ಕ್ರಿಕೆಟ್, ಖೋ-ಖೋ, ಟೇಬಲ್ ಟೆನ್ನಿಸ್, ಹ್ಯಾಂಡ್ ಬಾಲ್, ವಾಟರ್ ಸ್ಪೋರ್ಟ್ಸ್ ರೋಯಿಂಗ್, ವಾಟರ್ ಸ್ಪೋರ್ಟ್ಸ್ – ಕಯಾಕಿಂಗ್, ವಾಟರ್ ಸ್ಪೋರ್ಟ್ಸ್ – ಕೆನೊಯಿಂಗ್, ಲಾನ್ ಟೆನಿಸ್, ಬ್ಯಾಡ್ಮಿಂಟನ್, ಸೇಪಕ್ ಟಕ್ರಾ, ಟೇಕ್ವಾಂಡೋ, ಪ್ಯಾರಾ ಲಾನ್ ಬೌಲ್, ಪ್ಯಾರಾ ಟೆನ್ಪಿನ್ ಬೌಲಿಂಗ್ ಆಟಗಳಲ್ಲಿ ಭಾಗವಹಿಸಿದ ಪ್ರತಿಭಾವಂತರಿಗೆ ಮೀಸಲು ಸಿಗಲಿದೆ.
ಎಷ್ಟು ಗ್ರೇಡಿಂಗ್ ಅಥವಾ ಕೃಪಾಂಕ ಸಿಗಲಿದೆ?
ಇನ್ನು ಗ್ರೇಡಿಂಗ್ ಅಥವಾ ಕೃಪಾಂಕದ ಕುರಿತು ನಿಯಮಗಳಲ್ಲಿ ತಿಳಿಸಲಾಗಿದೆ. ವಿವಿಧ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಪಡೆದವರಿಗೆ ಕೃಪಾಂಕ ನಿಗದಿಪಡಿಸಲಾಗಿದೆ. 75 ರಿಂದ 46ರವರೆಗೆ ಗ್ರೇಡಿಂಗ್ ದೊರೆಯಲಿದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ಗೆ ವಿಮಾನ, ಟೈಮಿಂಗ್ ಏನು? ಟಿಕೆಟ್ ಬುಕಿಂಗ್ ಹೇಗೆ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





