STATE NEWS, 4 OCTOBER 2024 : ಚಾರಣಕ್ಕೆ (Trekking) ಹೋಗುವವರಿಗೆ ಅರಣ್ಯ ಇಲಾಖೆ ಆನ್ಲೈನ್ನಲ್ಲೇ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಿದೆ. ಇದಕ್ಕಾಗಿ ವೆಬ್ಸೈಟ್ ರೂಪಿಸಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ವೆಬ್ಸೈಟ್ ಉದ್ಘಾಟಿಸಿದರು.
ಕನಿಷ್ಠ 300 ಚಾರಣಿಗರಿಗೆ ಅವಕಾಶ
ಚಾರಣಕ್ಕೆ ಹೋಗುವವರು https://aranyavihaara.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಅವಕಾಶ ಕಲ್ಪಿಸಲಾಗುತ್ತದೆ.
![]() |
ಈ ವೆಬ್ಸೈಟ್ನಲ್ಲಿ ರಾಜ್ಯದ ಎಲ್ಲ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್ ಸಿಗದವರು ಬೇರೆ ಚಾರಣಪಥವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
ಚಾರಣ ಪಥಗಳ ಟಿಕೆಟ್ಗಳನ್ನು ಕೆಲವು ಖಾಸಗಿ ಸಂಸ್ಥೆಗಳು ಖರೀದಿ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆ ಅಕ್ರಮ ತಡೆಗೆ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ಭಾವಚಿತ್ರ ಸಹಿತ ಗುರುತಿನ ಚೀಟಿ ಅಪ್ ಲೋಡ್ ಮಾಡಿ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿ 10-20 ಚಾರಣಿಗರಿಗೆ ಒಬ್ಬರಂತೆ ಗೈಡ್ಗಳನ್ನೂ ನಿಯೋಜಿಸಲಾಗುತ್ತದೆ. ಒಂದು ಫೋನ್ ನಂಬರ್ನಲ್ಲಿ 10 ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಸ್ತುತ ಕುಮಾರ ಪರ್ವತದಿಂದ ಸುಬ್ರಹ್ಮಣ್ಯ, ಬೀದಹಳ್ಳಿಯಿಂದ ಕುಮಾರ ಪರ್ವತ, ಬೀದಹಳ್ಳಿ -ಕುಮಾರ ಪರ್ವತ ಸುಬ್ರಹ್ಮಣ್ಯ, ಚಾಮರಾಜನಗರ – ನಾಗಮಲೈ, ತಲಕಾವೇರಿಯಿಂದ -ನಿಶಾನೆಮೊಟ್ಟೆ ಚಾರಣ ತಾಣಗಳಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ. ತಿಂಗಳ ಅಂತ್ಯದೊಳಗೆ 40 ಚಾರಣ ಪಥಗಳನ್ನು ಜಾಲತಾಣದಲ್ಲಿ ಸೇರಿಸಲಾಗುವುದು.
ವನ್ಯಜೀವಿ ಮತ್ತು ಬೋಟ್ ಸಫಾರಿಗೂ ಟಿಕೆಟ್ ಕಾಯ್ದಿರಿಸಲು ವೆಬ್ಸೈಟ್ನಲ್ಲಿ ಅವಕಾಶವಿದೆ. ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್, ತಿಂಡಿ ಪೊಟ್ಟಣ ನಿಷೇಧಿಸಲಾಗುವುದು. ಸಿಕ್ಕಿ ಬಿದ್ದರೆ ದಂಡ ವಿಧಿಸಲಾಗುತ್ತದೆ.
ಇದನ್ನೂ ಓದಿ » ಶಿವಮೊಗ್ಗ ದಸರಾ ವೇದಿಕೆಯಲ್ಲಿ ನಟಿ ಉಮಾಶ್ರೀ ಗರಂ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200