ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಒಣಗುತ್ತಿವೆ ಬೆಳೆ, ಚಿಂತೆಗೀಡಾದ ರೈತ
ರಣ ಬಿಸಿಲು ರೈತ ಸಮುದಾಯವನ್ನು ಚಿಂತೆಗೀಡು ಮಾಡಿದೆ. ಭತ್ತ, ಜೋಳದ ಬೆಳೆಗೆ ಹೆಚ್ಚು ನೀರು ಬೇಕು. ವಿಪರೀತ ಬಿಸಿಲಿನಿಂದಾಗಿ ನೀರಿಲ್ಲದೆ ರೈತರು ಬೇಸಿಗೆ ಬೆಳೆಯ ಯೋಚನೆ ಕೈಬಿಟ್ಟಿದ್ದಾರೆ. ಪಂಪ್ ಸೆಟ್, ಬಾವಿಗಳ ನಿರೀಕ್ಷೆಯಲ್ಲಿ ಬೆಳೆ ಬೆಳೆದವರು ಈಗ ನೀರಿನ ಅಭಾವದಿಂದ ಪರಿತಪಿಸುತ್ತಿದ್ದಾರೆ. ಅಡಿಕೆ ತೋಟಗಳು ಕೂಡ ಒಣಗುತ್ತಿದ್ದು ಬೆಳೆಗಾರರನ್ನು ಚಿಂತೆಗೀಡು ಮಾಡಿದೆ.

ಮರಗಳನ್ನೆಲ್ಲ ಕಡಿದು ಈಗ ನೆರಳಿಗೆ ಹುಡುಕಾಟ
ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ನಗರದ ವಿವಿಧೆಡೆ ಮರಗಳ ಕಡಿತಲೆ ಮಾಡಲಾಗಿದೆ. ಈಗ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಜನರು ಬೆರಳೆಣಿಕೆ ಮರಗಳ ನೆರಳು ಅರಸುತ್ತಿದ್ದಾರೆ. ಮರದ ನೆರಳು ಇರುವೆಡೆ ವಾಹನಗಳ ಪಾರ್ಕಿಂಗ್ಗೆ ನೂಕುನುಗ್ಗಲು ಉಂಟಾಗುತ್ತಿದೆ. ಟ್ರಾಫಿಕ್ ಸಿಗ್ನಲ್ಗಳಲ್ಲಿ ಮರಗಳ ಕೆಳಗೆ, ಬಸ್ಸು, ಲಾರಿಗಳ ನೆರಳಿನಲ್ಲಿ ವಾಹನಗಳನ್ನು ನಿಲ್ಲಿಸಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ.
ಮುಂದಿನ ಐದು ದಿನ ಹೇಗಿರುತ್ತೆ ಹವಾಮಾನ? ಬೂತ್ ಕಾರ್ಯಕರ್ತರಿಗೆ ತಲೆನೋವಾದ ಬಿಸಿಲ ಝಳ, ಹೇಗದು – ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















