ಐದು ದಿನ ಒಣಹವೆ ಮುಂದುವರಿಕೆ
ಜೋರು ಮಳೆಯಾಗಿ ಭೂಮಿ ತಂಪಾಲಿ ಎಂದು ಜನರು ಹಂಬಲಿಸುತ್ತಿದ್ದಾರೆ. ಆದರೆ ಇನ್ನು ಐದು ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ಏ.28 ರಿಂದ ಮೇ 2ರವರೆಗೆ ಒಣಹವೆ ಇರಲಿದೆ. ತಾಪಮಾನವು 2 ರಿಂದ 3 ಡಿಗ್ರಿಯಷ್ಟು ಹೆಚ್ಚಳವಾಗುವ ಸಂಭವ ಇದೆ ಎಂದು ತಿಳಿಸಲಾಗಿದೆ.
ಬೂತ್ ಕಾರ್ಯಕರ್ತರಿಗೆ ಇಕ್ಕಟ್ಟು
ಲೋಕಸಭೆ ಚುನಾವಣೆ ಪ್ರಚಾರ ಕಾರ್ಯ ಬಿರುಸಾಗಿದೆ. ಸಭೆ, ಸಮಾರಂಭಗಳನ್ನು ಆಯೋಜಿಸಲಾಗುತ್ತಿದೆ. ಆದರೆ ಇವುಗಳಿಗೆ ಜನರನ್ನು ಕರೆತರುವುದೆ ರಾಜಕಾರಣಿಗಳಿಗೆ ಕಷ್ಟವಾಗಿದೆ. ರಾಜ್ಯ, ರಾಷ್ಟ್ರಮಟ್ಟದ ನಾಯಕರು ಆಗಮಿಸಿದಾಗ ಹೆಚ್ಚು ಜನರನ್ನು ಸೇರಿಸಬೇಕು ಎಂದು ಬೂತ್ ಮಟ್ಟದ ಕಾರ್ಯಕರ್ತರಿಗೆ ಫರ್ಮಾನು ಹೊರಡಿಸಲಾಗಿದೆ. ಬಿಸಿಲಿನ ಕಾರಣಕ್ಕೆ ಜನರು ಸಭೆ, ಸಮಾರಂಭಗಳಿಂದ ದೂರ ಉಳಿಯುತ್ತಿದ್ದಾರೆ. ಇದು ಬೂತ್ ಮಟ್ಟದ ಕಾರ್ಯಕರ್ತರ ತಲೆಬಿಸಿ ತರಿಸಿದೆ.
ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಯಾವಾಗ? – ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200