ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 ಮಾರ್ಚ್ 2022
ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲನ್ನು 65 ನಿಮಿಷ ಬೀರೂರಿನಲ್ಲಿ ನಿಯಂತ್ರಿಸಲಾಗುತ್ತದೆ. ಮಾರ್ಚ್ ತಿಂಗಳಲ್ಲಿ ನಾಲ್ಕು ದಿನ ಹೀಗೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರೈಲು ಸಂಖ್ಯೆ 16227 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲನ್ನು ಮಾರ್ಚ್ 10, ಮಾರ್ಚ್ 13, ಮಾರ್ಚ್ 15 ಮತ್ತು ಮಾರ್ಚ್ 17ರಂದು ನಿಯಂತ್ರಿಸಲಾಗುತ್ತದೆ. ಬೀರೂರು ಜಂಕ್ಷನ್’ನಲ್ಲಿ 65 ನಿಮಿಷ ರೈಲು ನಿಲುಗಡೆಯಾಗಲಿದೆ. ಆನಂತರ ಪ್ರಯಾಣ ಆರಂಭಿಸಲಿದೆ.
ನಿಯಂತ್ರಣಕ್ಕೆ ಕಾರಣವೇನು?
ಶಿವಮೊಗ್ಗ ಟೌನ್ ಭಾಗದಲ್ಲಿ ಎಂಜಿನಿಯರಿಂಗ್ ಸಂಬಂಧ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಲೈನ್ ಬ್ಲಾಕ್ ಮಾಡಲಾಗುತ್ತಿದ್ದೆ. ಆದ್ದರಿಂದ ಮೈಸೂರು ತಾಳಗುಪ್ಪ ರೈಲನ್ನು 65 ನಿಮಿಷಯ ನಿಯಂತ್ರಣ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೈಸೂರು ತಾಳಗುಪ್ಪ ರೈಲು ರಾತ್ರಿ 7.30ಕ್ಕೆ ಮೈಸೂರಿನಿಂದ ಹೊರಡುತ್ತಿದೆ. 8.16ಕ್ಕೆ ಮಂಡ್ಯ, 9.02ಕ್ಕೆ ರಾಮನಗರ, 10.55ಕ್ಕೆ ಬೆಂಗಳೂರು ತಲುಪಲಿದೆ. ರಾತ್ರಿ 2.53ಕ್ಕೆ ಬೀರೂರು ತಲುಪಲಿದೆ. ಈ ನಾಲ್ಕು ದಿನ ಬೀರೂರಿನಲ್ಲಿ ಒಂದು ಗಂಟೆ ರೈಲು ನಿಲ್ಲಲಿದೆ. ಆ ಬಳಿಕ ಪ್ರಯಾಣ ಆರಂಭಿಸಲಿದೆ.
ಇದನ್ನೂ ಓದಿ | ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















